ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯದ ಜನತೆಯ ಆಶೀರ್ವಾದ ಇರೋವರೆಗೆ ನನ್ನನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸಭಾ ಕಲಾಪದಲ್ಲಿ ಮಾತನಾಡಿದ ಸಿಎಂ, ಕಳೆದ 6 ತಿಂಗಳಿನಿಂದ ನನ್ನನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸುತ್ತಾರೆ ಅಂತ ಬೆಳಗ್ಗೆ ಎದ್ದಾಗಿನಿಂದ ಹೇಳ್ತಿದ್ದೀರಿ. ಆದರೆ ಎಲ್ಲಿವರೆಗೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವರ ಶಾ ಅವರ ಬೆಂಬಲ ಹಾಗೂ ರಾಜ್ಯದ ಜನರ ಆಶೀರ್ವಾದ ಇದೆಯೋ ಅಲ್ಲಿಯವರೆಗೆ ನನ್ನನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ಇಬ್ಬರು ಇರುವವರೆಗೆ ನನ್ನ ಮೇಲೆ 100 ಕೇಸ್ ಹಾಕಿದರು ಕೂಡ ನಾನು ಹೆದರಲ್ಲ. ನಾನು ಪ್ರಾಮಾಣಿಕ ಅನ್ನೋದನ್ನ ಸಾಬೀತು ಮಾಡ್ತೀನಿ. ದಾರಿಯಲ್ಲಿ ಹೋಗುವವರೆಲ್ಲ ಆರ್ಟಿಐ ನಲ್ಲಿ ಅರ್ಜಿ ಹಾಕಿ ಕೇಸ್ ಹಾಕ್ತಾರೆ. ನಾವು ಮನಸ್ಸು ಮಾಡಿದರೆ ಎಷ್ಟು ಕೇಸ್ ಬೇಕಾದರು ಹಾಕಬಹುದು. ಆದರೆ ನಾವು ಹಾಗೆ ಮಾಡಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನ 150 ಸ್ಥಾನಗಳಲ್ಲಿ ಗೆಲ್ಲಿಸಿ ನಿಮ್ಮನ್ನ ವಿರೋಧ ಪಕ್ಷದಲ್ಲಿ ಕೂರಿಸುತ್ತೇನೆ ಎಂದು ಕಾಂಗ್ರೆಸ್ ವಿರುದ್ಧ ಸಿಎಂ ಕಿಡಿಕಾರಿದರು.
ದೇವರ ದಯೆಯಿಂದ ಮುಂದೆ ಒಳ್ಳೆ ಕಾಲ ಬರುತ್ತೆ. ಎಲ್ಲರು ಸೇರಿ ರಾಜ್ಯದ ಅಭಿವೃದ್ಧಿ ಮಾಡಲು ಶ್ರಮ ವಹಿಸೋಣ. ಬರುವಂತ ದಿನಗಳಲ್ಲಿ ತೆರಿಗೆ ಸುಧಾರಣೆ ಕಾಣಲಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಭರವಸೆ ನೀಡಿದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…