ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯದ ಜನತೆಯ ಆಶೀರ್ವಾದ ಇರೋವರೆಗೆ ನನ್ನನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸಭಾ ಕಲಾಪದಲ್ಲಿ ಮಾತನಾಡಿದ ಸಿಎಂ, ಕಳೆದ 6 ತಿಂಗಳಿನಿಂದ ನನ್ನನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸುತ್ತಾರೆ ಅಂತ ಬೆಳಗ್ಗೆ ಎದ್ದಾಗಿನಿಂದ ಹೇಳ್ತಿದ್ದೀರಿ. ಆದರೆ ಎಲ್ಲಿವರೆಗೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವರ ಶಾ ಅವರ ಬೆಂಬಲ ಹಾಗೂ ರಾಜ್ಯದ ಜನರ ಆಶೀರ್ವಾದ ಇದೆಯೋ ಅಲ್ಲಿಯವರೆಗೆ ನನ್ನನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ಇಬ್ಬರು ಇರುವವರೆಗೆ ನನ್ನ ಮೇಲೆ 100 ಕೇಸ್ ಹಾಕಿದರು ಕೂಡ ನಾನು ಹೆದರಲ್ಲ. ನಾನು ಪ್ರಾಮಾಣಿಕ ಅನ್ನೋದನ್ನ ಸಾಬೀತು ಮಾಡ್ತೀನಿ. ದಾರಿಯಲ್ಲಿ ಹೋಗುವವರೆಲ್ಲ ಆರ್ಟಿಐ ನಲ್ಲಿ ಅರ್ಜಿ ಹಾಕಿ ಕೇಸ್ ಹಾಕ್ತಾರೆ. ನಾವು ಮನಸ್ಸು ಮಾಡಿದರೆ ಎಷ್ಟು ಕೇಸ್ ಬೇಕಾದರು ಹಾಕಬಹುದು. ಆದರೆ ನಾವು ಹಾಗೆ ಮಾಡಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನ 150 ಸ್ಥಾನಗಳಲ್ಲಿ ಗೆಲ್ಲಿಸಿ ನಿಮ್ಮನ್ನ ವಿರೋಧ ಪಕ್ಷದಲ್ಲಿ ಕೂರಿಸುತ್ತೇನೆ ಎಂದು ಕಾಂಗ್ರೆಸ್ ವಿರುದ್ಧ ಸಿಎಂ ಕಿಡಿಕಾರಿದರು.
ದೇವರ ದಯೆಯಿಂದ ಮುಂದೆ ಒಳ್ಳೆ ಕಾಲ ಬರುತ್ತೆ. ಎಲ್ಲರು ಸೇರಿ ರಾಜ್ಯದ ಅಭಿವೃದ್ಧಿ ಮಾಡಲು ಶ್ರಮ ವಹಿಸೋಣ. ಬರುವಂತ ದಿನಗಳಲ್ಲಿ ತೆರಿಗೆ ಸುಧಾರಣೆ ಕಾಣಲಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಭರವಸೆ ನೀಡಿದರು.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…