ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯದ ಜನತೆಯ ಆಶೀರ್ವಾದ ಇರೋವರೆಗೆ ನನ್ನನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸಭಾ ಕಲಾಪದಲ್ಲಿ ಮಾತನಾಡಿದ ಸಿಎಂ, ಕಳೆದ 6 ತಿಂಗಳಿನಿಂದ ನನ್ನನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸುತ್ತಾರೆ ಅಂತ ಬೆಳಗ್ಗೆ ಎದ್ದಾಗಿನಿಂದ ಹೇಳ್ತಿದ್ದೀರಿ. ಆದರೆ ಎಲ್ಲಿವರೆಗೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವರ ಶಾ ಅವರ ಬೆಂಬಲ ಹಾಗೂ ರಾಜ್ಯದ ಜನರ ಆಶೀರ್ವಾದ ಇದೆಯೋ ಅಲ್ಲಿಯವರೆಗೆ ನನ್ನನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ಇಬ್ಬರು ಇರುವವರೆಗೆ ನನ್ನ ಮೇಲೆ 100 ಕೇಸ್ ಹಾಕಿದರು ಕೂಡ ನಾನು ಹೆದರಲ್ಲ. ನಾನು ಪ್ರಾಮಾಣಿಕ ಅನ್ನೋದನ್ನ ಸಾಬೀತು ಮಾಡ್ತೀನಿ. ದಾರಿಯಲ್ಲಿ ಹೋಗುವವರೆಲ್ಲ ಆರ್ಟಿಐ ನಲ್ಲಿ ಅರ್ಜಿ ಹಾಕಿ ಕೇಸ್ ಹಾಕ್ತಾರೆ. ನಾವು ಮನಸ್ಸು ಮಾಡಿದರೆ ಎಷ್ಟು ಕೇಸ್ ಬೇಕಾದರು ಹಾಕಬಹುದು. ಆದರೆ ನಾವು ಹಾಗೆ ಮಾಡಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನ 150 ಸ್ಥಾನಗಳಲ್ಲಿ ಗೆಲ್ಲಿಸಿ ನಿಮ್ಮನ್ನ ವಿರೋಧ ಪಕ್ಷದಲ್ಲಿ ಕೂರಿಸುತ್ತೇನೆ ಎಂದು ಕಾಂಗ್ರೆಸ್ ವಿರುದ್ಧ ಸಿಎಂ ಕಿಡಿಕಾರಿದರು.
ದೇವರ ದಯೆಯಿಂದ ಮುಂದೆ ಒಳ್ಳೆ ಕಾಲ ಬರುತ್ತೆ. ಎಲ್ಲರು ಸೇರಿ ರಾಜ್ಯದ ಅಭಿವೃದ್ಧಿ ಮಾಡಲು ಶ್ರಮ ವಹಿಸೋಣ. ಬರುವಂತ ದಿನಗಳಲ್ಲಿ ತೆರಿಗೆ ಸುಧಾರಣೆ ಕಾಣಲಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಭರವಸೆ ನೀಡಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…