Featured

ಪ್ರಧಾನಿ ಮೋದಿ ಅವರು ಖಂಡಿತ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ..

ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಇದೀಗ ನಾಲ್ಕು ವರ್ಷಗಳು ಕಳೆದಿವೆ. ನಾಲ್ಕು ವರ್ಷ ಕಳೆದರೂ ಮೋದಿಯವರ ವರ್ಚಸ್ಸು ಇನ್ನೂ ಹಾಗೆಯೇ ಇದೆ. ಒಂದರ ಮೇಲೊಂದು ರಾಜ್ಯಗಳನ್ನು ಗೆಲ್ಲುವ ಮೂಲಕ ದೇಶದ ಜನತೆ ನಾವು ನಿಮ್ಮೊಂದಿಗಿದ್ದೇವೆ ಎಂಬ ಸಂದೇಶವನ್ನು ಈಗಾಗಲೇ ಮೋದಿಯವರಿಗೆ ರವಾನಿಸಿದ್ದಾರೆ. ತಮ್ಮ ಹಲವಾರು ದಿಟ್ಟ ನಿರ್ಧಾರಗಳು, ಧೈರ್ಯಶಾಲಿ ಆದೇಶಗಳಿಂದ ರಾಷ್ಟ್ರದ ಮನ ಗೆದ್ದವರು ನರೇಂದ್ರ ಮೋದಿ. ಒಂದು ಕಾಲದಲ್ಲಿ ಗುಜರಾತ್ ನಲ್ಲಿ ಚಹಾ ಮಾರುತ್ತಿದ್ದ ವ್ಯಕ್ತಿ ಇಂದು ಭಾರತದ ಪ್ರಧಾನಿಯಾಗಿ ವಿಶ್ವ ನಾಯಕನಾಗಿ ಬೆಳೆದು ನಿಂತಿದ್ದಾರೆ.

ಪ್ರಸ್ತುತ ಇದೀಗ ನರೇಂದ್ರ ಮೋದಿ ಅವರು ಕೊನೆಯ ವರ್ಷದ ಆಡಳಿತದಲ್ಲಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಮತ್ತೊಮ್ಮೆ ಚುನಾವಣೆ ಎದುರಾಗಲಿದೆ. ಅತ್ಯಂತ ಪ್ರತಿಷ್ಠೆಯ ಚುನಾವಣೆಗೆ ಎಲ್ಲಾ ಪಕ್ಷಗಳು ಈಗಾಗಲೇ ಸಿದ್ಧತೆಯಲ್ಲಿ ತೊಡಗಿವೆ. ಬಹುತೇಕ ಸಮೀಕ್ಷೆಗಳು ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ ಆಯ್ಕೆಯಾಗುತ್ತಾರೆ ಎಂದು ಸಾರಿ ಹೇಳುತ್ತಿವೆ. ಬಹುತೇಕ ರಾಜಕೀಯ ಪಂಡಿತರು ಕೂಡ ಅದೇ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಮಾಜಿ ಪ್ರಧಾನ ಮಂತ್ರಿ ಲಾಲ್ ಬಹದೂರ್ ಶಾಸ್ತ್ರಿ ಅವರ ಮಗ ಸುನೀಲ್ ಶಾಸ್ತ್ರಿ ಅವರು ಕೂಡ ಇದೇ ಮಾತನ್ನು ಹೇಳಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನನ್ನ ತಂದೆಯ ತರಹವೇ ಕೆಲಸ ಮಾಡುತ್ತಿದ್ದಾರೆ. ಅವರಲ್ಲಿ ನನ್ನ ತಂದೆಯನ್ನು ಕಾಣುತ್ತಿದ್ದೇನೆ. ದೇಶಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ವಿಶ್ವದೆಲ್ಲೆಡೆ ಭಾರತದ ಗೌರವವನ್ನು ಹೆಚ್ಚಿಸುತ್ತಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಪ್ರಧಾನಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿ ಅವರನ್ನು ಹೊರತುಪಡಿಸಿ ಬೇರೆ ಯಾವ ವ್ಯಕ್ತಿಯೂ ಸೂಕ್ತವಾಗಿ ನನಗೆ ಕಾಣುತ್ತಿಲ್ಲ‌. ತಮ್ಮ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಮಂತ್ಮೂಲಕೂಲಕ ದಾಖಲೆಯ ಸೀಟುಗಳನ್ನು ಪಡೆದು ಭಾರತೀಯ ಜನತಾ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

18 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

18 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago