ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಇದೀಗ ನಾಲ್ಕು ವರ್ಷಗಳು ಕಳೆದಿವೆ. ನಾಲ್ಕು ವರ್ಷ ಕಳೆದರೂ ಮೋದಿಯವರ ವರ್ಚಸ್ಸು ಇನ್ನೂ ಹಾಗೆಯೇ ಇದೆ. ಒಂದರ ಮೇಲೊಂದು ರಾಜ್ಯಗಳನ್ನು ಗೆಲ್ಲುವ ಮೂಲಕ ದೇಶದ ಜನತೆ ನಾವು ನಿಮ್ಮೊಂದಿಗಿದ್ದೇವೆ ಎಂಬ ಸಂದೇಶವನ್ನು ಈಗಾಗಲೇ ಮೋದಿಯವರಿಗೆ ರವಾನಿಸಿದ್ದಾರೆ. ತಮ್ಮ ಹಲವಾರು ದಿಟ್ಟ ನಿರ್ಧಾರಗಳು, ಧೈರ್ಯಶಾಲಿ ಆದೇಶಗಳಿಂದ ರಾಷ್ಟ್ರದ ಮನ ಗೆದ್ದವರು ನರೇಂದ್ರ ಮೋದಿ. ಒಂದು ಕಾಲದಲ್ಲಿ ಗುಜರಾತ್ ನಲ್ಲಿ ಚಹಾ ಮಾರುತ್ತಿದ್ದ ವ್ಯಕ್ತಿ ಇಂದು ಭಾರತದ ಪ್ರಧಾನಿಯಾಗಿ ವಿಶ್ವ ನಾಯಕನಾಗಿ ಬೆಳೆದು ನಿಂತಿದ್ದಾರೆ.
ಪ್ರಸ್ತುತ ಇದೀಗ ನರೇಂದ್ರ ಮೋದಿ ಅವರು ಕೊನೆಯ ವರ್ಷದ ಆಡಳಿತದಲ್ಲಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಮತ್ತೊಮ್ಮೆ ಚುನಾವಣೆ ಎದುರಾಗಲಿದೆ. ಅತ್ಯಂತ ಪ್ರತಿಷ್ಠೆಯ ಚುನಾವಣೆಗೆ ಎಲ್ಲಾ ಪಕ್ಷಗಳು ಈಗಾಗಲೇ ಸಿದ್ಧತೆಯಲ್ಲಿ ತೊಡಗಿವೆ. ಬಹುತೇಕ ಸಮೀಕ್ಷೆಗಳು ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ ಆಯ್ಕೆಯಾಗುತ್ತಾರೆ ಎಂದು ಸಾರಿ ಹೇಳುತ್ತಿವೆ. ಬಹುತೇಕ ರಾಜಕೀಯ ಪಂಡಿತರು ಕೂಡ ಅದೇ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಮಾಜಿ ಪ್ರಧಾನ ಮಂತ್ರಿ ಲಾಲ್ ಬಹದೂರ್ ಶಾಸ್ತ್ರಿ ಅವರ ಮಗ ಸುನೀಲ್ ಶಾಸ್ತ್ರಿ ಅವರು ಕೂಡ ಇದೇ ಮಾತನ್ನು ಹೇಳಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನನ್ನ ತಂದೆಯ ತರಹವೇ ಕೆಲಸ ಮಾಡುತ್ತಿದ್ದಾರೆ. ಅವರಲ್ಲಿ ನನ್ನ ತಂದೆಯನ್ನು ಕಾಣುತ್ತಿದ್ದೇನೆ. ದೇಶಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ವಿಶ್ವದೆಲ್ಲೆಡೆ ಭಾರತದ ಗೌರವವನ್ನು ಹೆಚ್ಚಿಸುತ್ತಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಪ್ರಧಾನಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿ ಅವರನ್ನು ಹೊರತುಪಡಿಸಿ ಬೇರೆ ಯಾವ ವ್ಯಕ್ತಿಯೂ ಸೂಕ್ತವಾಗಿ ನನಗೆ ಕಾಣುತ್ತಿಲ್ಲ. ತಮ್ಮ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಮಂತ್ಮೂಲಕೂಲಕ ದಾಖಲೆಯ ಸೀಟುಗಳನ್ನು ಪಡೆದು ಭಾರತೀಯ ಜನತಾ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…