ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಇದೀಗ ನಾಲ್ಕು ವರ್ಷಗಳು ಕಳೆದಿವೆ. ನಾಲ್ಕು ವರ್ಷ ಕಳೆದರೂ ಮೋದಿಯವರ ವರ್ಚಸ್ಸು ಇನ್ನೂ ಹಾಗೆಯೇ ಇದೆ. ಒಂದರ ಮೇಲೊಂದು ರಾಜ್ಯಗಳನ್ನು ಗೆಲ್ಲುವ ಮೂಲಕ ದೇಶದ ಜನತೆ ನಾವು ನಿಮ್ಮೊಂದಿಗಿದ್ದೇವೆ ಎಂಬ ಸಂದೇಶವನ್ನು ಈಗಾಗಲೇ ಮೋದಿಯವರಿಗೆ ರವಾನಿಸಿದ್ದಾರೆ. ತಮ್ಮ ಹಲವಾರು ದಿಟ್ಟ ನಿರ್ಧಾರಗಳು, ಧೈರ್ಯಶಾಲಿ ಆದೇಶಗಳಿಂದ ರಾಷ್ಟ್ರದ ಮನ ಗೆದ್ದವರು ನರೇಂದ್ರ ಮೋದಿ. ಒಂದು ಕಾಲದಲ್ಲಿ ಗುಜರಾತ್ ನಲ್ಲಿ ಚಹಾ ಮಾರುತ್ತಿದ್ದ ವ್ಯಕ್ತಿ ಇಂದು ಭಾರತದ ಪ್ರಧಾನಿಯಾಗಿ ವಿಶ್ವ ನಾಯಕನಾಗಿ ಬೆಳೆದು ನಿಂತಿದ್ದಾರೆ.
ಪ್ರಸ್ತುತ ಇದೀಗ ನರೇಂದ್ರ ಮೋದಿ ಅವರು ಕೊನೆಯ ವರ್ಷದ ಆಡಳಿತದಲ್ಲಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಮತ್ತೊಮ್ಮೆ ಚುನಾವಣೆ ಎದುರಾಗಲಿದೆ. ಅತ್ಯಂತ ಪ್ರತಿಷ್ಠೆಯ ಚುನಾವಣೆಗೆ ಎಲ್ಲಾ ಪಕ್ಷಗಳು ಈಗಾಗಲೇ ಸಿದ್ಧತೆಯಲ್ಲಿ ತೊಡಗಿವೆ. ಬಹುತೇಕ ಸಮೀಕ್ಷೆಗಳು ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ ಆಯ್ಕೆಯಾಗುತ್ತಾರೆ ಎಂದು ಸಾರಿ ಹೇಳುತ್ತಿವೆ. ಬಹುತೇಕ ರಾಜಕೀಯ ಪಂಡಿತರು ಕೂಡ ಅದೇ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಮಾಜಿ ಪ್ರಧಾನ ಮಂತ್ರಿ ಲಾಲ್ ಬಹದೂರ್ ಶಾಸ್ತ್ರಿ ಅವರ ಮಗ ಸುನೀಲ್ ಶಾಸ್ತ್ರಿ ಅವರು ಕೂಡ ಇದೇ ಮಾತನ್ನು ಹೇಳಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನನ್ನ ತಂದೆಯ ತರಹವೇ ಕೆಲಸ ಮಾಡುತ್ತಿದ್ದಾರೆ. ಅವರಲ್ಲಿ ನನ್ನ ತಂದೆಯನ್ನು ಕಾಣುತ್ತಿದ್ದೇನೆ. ದೇಶಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ವಿಶ್ವದೆಲ್ಲೆಡೆ ಭಾರತದ ಗೌರವವನ್ನು ಹೆಚ್ಚಿಸುತ್ತಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಪ್ರಧಾನಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿ ಅವರನ್ನು ಹೊರತುಪಡಿಸಿ ಬೇರೆ ಯಾವ ವ್ಯಕ್ತಿಯೂ ಸೂಕ್ತವಾಗಿ ನನಗೆ ಕಾಣುತ್ತಿಲ್ಲ. ತಮ್ಮ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಮಂತ್ಮೂಲಕೂಲಕ ದಾಖಲೆಯ ಸೀಟುಗಳನ್ನು ಪಡೆದು ಭಾರತೀಯ ಜನತಾ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…