Featured

ಪ್ರಧಾನಿ ಮೋದಿ ಜತೆಗೆ ಕನ್ನಡದಲ್ಲಿ ಸಂವಾದ ನಡೆಸಿದ ಪುತ್ತೂರಿನ ಕೃಷಿಕ – Vishwanews24

ಪುತ್ತೂರು:ಲೈವ್ ವೆಬ್ ಕಾಸ್ಟಿಂಗ್ ಮೂಲಕ ಕರ್ನಾಟಕರ ತುಮಕುರು ಹಾಗೂ ಪುತ್ತೂರು ರೈತರೊಡನೆ  ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರ ಮಟ್ಟರ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಚಾಲನೆ ನೀಡಿದ್ದಾರೆ.ಪುತ್ತೂರಿನ ಗೇರು ಸಂಶೋಧನಾ ಕೇಂದ್ರದಲ್ಲಿ ಪ್ರಧಾನಿಗಳ ಜತೆಗಿನ ನೇರ ಸಂವಾದ ಲೈವ್ ವೆಬ್ ಕಾಸ್ಟಿಂಗ್ ಆಯೋಜನೆ ಮೂಲಕ ಪುತ್ತೂರಿನ ಸೇಡಿಯಾಪು ಜನಾರ್ದನ್ ಭಟ್ ರಸಗೊಬ್ಬರ ಪೂರೈಕೆ ವಿಚಾರದ ಕುರಿತು ಮಾತುಕತೆ ನಡೆಸಿದ್ದಾರೆ.

ಉತ್ತರ ಪ್ರದೇಶದ ಗೋರಕ್ ಪುರದಲ್ಲಿ ನಡೆದ ಕಾರ್ಯಕ್ರಮದ ನೇರ ಪ್ರಸಾರ ದೇಶಾದ್ಯಂತ ನಡೆಯಿತು. ಇದರ ಜತೆಗೆ ಪ್ರಧಾನಿ ಅವರೊಂದಿಗೆ ಸಂವಾದವನ್ನೂ ಏರ್ಪಡಿಸಿತ್ತು. ಇದಕ್ಕಾಗಿ ಪುತ್ತೂರಿನ ಮೊಟ್ಟೆತ್ತಡ್ಕ ಗೇರು ಸಂಶೋಧನಾ ಕೇಂದ್ರದಲ್ಲಿ ಲೈವ್ ವೆಬ್ ಕಾಸ್ಟಿಂಗ್ ಆಯೋಜಿತವಾಗಿತ್ತು. ಈ ಸಂದರ್ಭ ಪುತ್ತೂರಿನ ಸೇಡಿಯಾಪು ಜನಾರ್ದನ್ ಭಟ್ ಪ್ರಧಾನಿಯೊಂದಿಗೆ ನೇರ ಮಾತುಕತೆ ನಡೆಸಿದ್ದಾರೆ.

“ನಾನೊಬ್ಬ ಗೇರು ಕೃಷಿಕ, ಬಾಳೆ, ಕಾಳುಮೆಣಸು, ಅಡಿಕೆ ಬೆಳೆಯುವ ಸಣ್ಣ ರೈತ.ನಮ್ಮ ಸುತ್ತಲೂ ಇದೇ ಬೆಳೆ ಬೆಳೆಯುವ ಅನೇಕ ಸಣ್ಣ ರೈತರಿದ್ದಾರೆ. ನೀವು ರೈತರಿಗೆ ನೆರವಾಗುವ ಅನೇಕ ಯೋಜನೆಯನ್ನು ಜಾರಿಗೆ ತಂದಿದ್ದೀರಿ.ಅದರಲ್ಲಿಯೂ ನೀಮ್ ಕೋಟಿಂಗ್ ಇರುವ ಯೂರಿಯಾ ರಸಗೊಬ್ಬರ, ಫಸಲ್ ಭೀಮಾ ಯೋಜನೆಗಳು ನಮಗೆ ಅನುಕೂಲವಾಗಿದೆ.ಈಗ ಜಾರಿಗೆ ತಂದ ಕಿಸಾನ್ ಸಮ್ಮಾನ್ ಯೋಜನೆ ಸಹ ಸಣ್ಣ ರೈತರಿಗೆ ಲಾಭ ತರಲಿದೆ.” ಎಂದು ಅವರು ಪ್ರಧಾನಿಗಳಿಗೆ ಹೇಳಿದ್ದಾರೆ.

ಪ್ರಧಾನಿ ಜತೆ ಸಂವಾದದ ನಂತರ ಸುದ್ದಿಗಾರರೊಡನೆ ಮಾತನಾಡಿದ ರೈತ ಜನಾರ್ಧನ ಭಟ್, ಪ್ರಧಾನಿ ಜೊತೆಗಿನ ಮಾತುಕತೆ ಬಗೆಗೆ ಸಂತಸ ವ್ಯಕ್ತಪಡಿಸುತ್ತಾ”ನಾನು ಕನ್ನಡದಲ್ಲೇ ಮಾತನಾಡಿದೆ. ಹಿಂದಿ ಭಾಷಾಂತರಕಾರರು ನನ್ನ ಮಾತನ್ನು ಅವರಿಗೆ ಮನವರಿಕೆ ಮಾಡಿಸಿದ್ದಾರೆ. ಕರಾವಳಿ ಭಾಗದ ಎಲ್ಲಾ ರೈತರ ಪರವಾಗಿ ಪ್ರಧಾನಿ ಜತೆ ಮಾತನಾಡಲು, ಅವರಿಗೆ ಧನ್ಯವಾದ ಹೇಳಲು ನನಗೆ ಅವಕಾಶ ದೊರಕಿದ್ದು ಸಂತಸ ತಂದಿದೆ.ಇದೊಂದು ಅವಿಸ್ಮರಣೀಯ ಕ್ಷಣ” ಎಂದಿದ್ದಾರೆ.

 

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago