ಜೈಪುರ: ಅರ್ಥ ವ್ಯವಸ್ಥೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸರಿಯಾದ ಜ್ಞಾನವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ರಾಜಸ್ಥಾನದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು ಹಳೆಯ ಮಾನದಂಡಗಳನ್ನು ಉಪಯೋಗಿಸುತ್ತಿರುವುದರಿಂದ ಭಾರತದ ಒಟ್ಟು ದೇಶಿಯ ಉತ್ಪನ್ನ(ಜಿಡಿಪಿ) ಶೇ 2.5ರ ಮಂದಗತಿಯ ಬೆಳವಣಿಗೆಯಲ್ಲಿ ಸಾಗುತ್ತಿದೆ. ಈ ಮೂಲಕ ಪ್ರಧಾನಿ ಮೋದಿ ಜಾಗತಿಕ ಮಟ್ಟದಲ್ಲಿ ಭಾರತದ ಚಿತ್ರಣವನ್ನು ನಾಶ ಮಾಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಯುಪಿಎ ಅವಧಿಯಲ್ಲಿ ಭಾರತದ ಜಿಡಿಪಿ ಶೇ. 9 ರಷ್ಟಿತ್ತು. ಇಡೀ ವಿಶ್ವವೇ ನಮ್ಮತ್ತ ತಿರುಗಿ ನೋಡುತ್ತಿತ್ತು ಎಂದಿರುವ ರಾಹುಲ್, ಬಹುಶಃ ಪ್ರಧಾನಿ ಮೋದಿ ಆರ್ಥಶಾಸ್ತ್ರ ಅಧ್ಯಯನ ಮಾಡದೇ ಇರಬಹುದು ಅಥವಾ ಅರ್ಥ ಮಾಡಿಕೊಳ್ಳದೇ ಇರಬಹುದು, ಇದರಿಂದಲೇ ಆರ್ಥಿಕತೆ ಮಂದಗತಿಯಲ್ಲಿದೆ ಎಂದು ದೂರಿದ್ದಾರೆ.
ಪ್ರಧಾನಿ ಮೋದಿಗೆ ಜಿಎಸ್ಟಿ ಅಂದರೆ ಏನು ಎಂಬುದು ಸಹ ತಿಳಿದಿಲ್ಲ. ನೋಟ್ ಬ್ಯಾನ್ ಮಾಡಿ ಏನು ಪ್ರಯೋಜನ ಪಡೆದರು. ನೋಟ್ ಬ್ಯಾನ್ನಿಂದ ಒಳ್ಳೆಯದಕ್ಕಿಂತ ತೊಂದರೆಯೇ ಹೆಚ್ಚಾಯಿತು ಎಂದರು.
ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ…
ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ಬಾಲಕಿ ಗಂಭೀರ ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು…
ವಂಚನೆ ಪ್ರಕರಣ : ಝೀನತ್ ಜಾಮೀನು ಅರ್ಜಿ ತಿರಸ್ಕೃತ ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪಡುಬಿದ್ರಿಯ ಝೀನತ್ ಇಬ್ರಾಹಿಂ ಜಾಮೀನಿಗಾಗಿ…
ಉಡುಪಿ: ನೇರ ಸಂದರ್ಶನ ಉಡುಪಿ: ಉಡುಪಿಯ ಆಕ್ಸಿಸ್ ಮ್ಯಾಕ್ಸ್ ಲೈಫ್ 2ನೇ ಮಹಡಿ ಪ್ರಗತಿ ಬಿಸಿನೆಸ್ ಪಾರ್ಕ್ ಕ್ರೋಮಾ ಬಿಲ್ಡಿಂಗ್…
ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…
ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…