ನವದೆಹಲಿ: ಮೋದಿ ನೇತೃತ್ವದ ಸಂಘಟನೆ ದೇಶವನ್ನು ಹೇಗೆ ಒಡೆಯುವುದು ಮತ್ತು ದ್ವೇಷವನ್ನು ಹೇಗೆ ಹರಡುವುದು ಎಂಬ ಬಗ್ಗೆ ಕಲಿಸಿದೆ. ಹೀಗೆ ಮಾಡುವಲ್ಲಿ ಅವರು ನಂಬರ್ 1 ಸ್ಥಾನದಲ್ಲಿದ್ದಾರೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ ಆರ್ ಸಿ ಜಾರಿ ಮಹಾತ್ಮ ಗಾಂಧಿ ಸಮಾಧಿ ರಾಜ್ ಘಾಟ್ ಬಳಿ ನಡೆದ ಏಕತೆಗಾಗಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ದ್ವೇಷವನ್ನು ಹರಡಲು ಹಾಗೂ ದೇಶವನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಅವರು ಸಂವಿಧಾನದ ಮೇಲೆ ದಾಳಿ ಮಾಡಲು, ಭಾರತ ಮಾತೆಯ ಧ್ವನಿಯನ್ನು ಅಡಗಿಸಲು ಜನರು ಅವಕಾಶ ಮಾಡಿಕೊಡಲ್ಲ ಎಂದು ಗುಡುಗಿದ್ದಾರೆ.
ದೇಶದ ಪ್ರಗತಿಯನ್ನು ತಡೆಯಲು ನಮ್ಮ ಶತ್ರುಗಳು ಏನನ್ನೂ ಮಾಡಲಿಲ್ಲವೋ ಅದನ್ನು ಈಗ ಮೋದಿ ಮಾಡುತ್ತಿದ್ದಾರೆ. ನೀವು ಉದ್ಯೋಗ ಒದಗಿಸಲಿಲ್ಲ, ದೇಶದ ಆರ್ಥಿಕತೆಯನ್ನು ಹಾಳು ಮಾಡಿದ್ದಾರೆ. ಇದೇ ನಮ್ಮ ಬಲವಾಗಿದೆ. ಆದ್ದರಿಂದ ನೀವು ದ್ವೇಷದ ಹಿಂದೆ ಅಡಗಿದ್ದೀರಿ ಎಂದು ವಾಗ್ದಾಳಿ ನಡೆಸಿದರು.
ಇದೇ ವೇಳೆ ಅವರು, ದೇಶದಲ್ಲಿ ಯುವಕರು ಏಕೆ ಉದ್ಯೋಗ ಪಡೆಯುತ್ತಿಲ್ಲ, ವಿದ್ಯಾರ್ಥಿಗಳ ಧ್ವನಿಯನ್ನು ಏಕೆ ಅಡಗಿಸಲಾಗುತ್ತಿದೆ ಎಂಬುದರ ಬಗ್ಗೆ ದೇಶಕ್ಕೆ ಮೋದಿ ತಿಳಿಸಬೇಕಾಗಿದೆ ಎಂದು ಆಗ್ರಹಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…