Featured

ಪ್ರಧಾನಿ ಮೋದಿ ದ್ವೇಷವನ್ನು ಹರಡಲು ಹಾಗೂ ದೇಶವನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ : ರಾಹುಲ್ ಗಾಂಧಿ -Vishwanews24

ನವದೆಹಲಿ: ಮೋದಿ ನೇತೃತ್ವದ ಸಂಘಟನೆ ದೇಶವನ್ನು ಹೇಗೆ ಒಡೆಯುವುದು ಮತ್ತು ದ್ವೇಷವನ್ನು ಹೇಗೆ ಹರಡುವುದು ಎಂಬ ಬಗ್ಗೆ ಕಲಿಸಿದೆ. ಹೀಗೆ ಮಾಡುವಲ್ಲಿ ಅವರು ನಂಬರ್ 1 ಸ್ಥಾನದಲ್ಲಿದ್ದಾರೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ ಆರ್ ಸಿ ಜಾರಿ ಮಹಾತ್ಮ ಗಾಂಧಿ ಸಮಾಧಿ ರಾಜ್ ಘಾಟ್ ಬಳಿ ನಡೆದ ಏಕತೆಗಾಗಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ದ್ವೇಷವನ್ನು ಹರಡಲು ಹಾಗೂ ದೇಶವನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಅವರು ಸಂವಿಧಾನದ ಮೇಲೆ ದಾಳಿ ಮಾಡಲು, ಭಾರತ ಮಾತೆಯ ಧ್ವನಿಯನ್ನು ಅಡಗಿಸಲು ಜನರು ಅವಕಾಶ ಮಾಡಿಕೊಡಲ್ಲ ಎಂದು ಗುಡುಗಿದ್ದಾರೆ.

ದೇಶದ ಪ್ರಗತಿಯನ್ನು ತಡೆಯಲು ನಮ್ಮ ಶತ್ರುಗಳು ಏನನ್ನೂ ಮಾಡಲಿಲ್ಲವೋ ಅದನ್ನು ಈಗ ಮೋದಿ ಮಾಡುತ್ತಿದ್ದಾರೆ. ನೀವು ಉದ್ಯೋಗ ಒದಗಿಸಲಿಲ್ಲ, ದೇಶದ ಆರ್ಥಿಕತೆಯನ್ನು ಹಾಳು ಮಾಡಿದ್ದಾರೆ. ಇದೇ ನಮ್ಮ ಬಲವಾಗಿದೆ. ಆದ್ದರಿಂದ ನೀವು ದ್ವೇಷದ ಹಿಂದೆ ಅಡಗಿದ್ದೀರಿ ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ ಅವರು, ದೇಶದಲ್ಲಿ ಯುವಕರು ಏಕೆ ಉದ್ಯೋಗ ಪಡೆಯುತ್ತಿಲ್ಲ, ವಿದ್ಯಾರ್ಥಿಗಳ ಧ್ವನಿಯನ್ನು ಏಕೆ ಅಡಗಿಸಲಾಗುತ್ತಿದೆ ಎಂಬುದರ ಬಗ್ಗೆ ದೇಶಕ್ಕೆ ಮೋದಿ ತಿಳಿಸಬೇಕಾಗಿದೆ ಎಂದು ಆಗ್ರಹಿಸಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

7 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

8 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago