Featured

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ 8ನೇ ವರ್ಷದ ಸಂಭ್ರಮಾಚರಣೆಯ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನ ಯಶಸ್ವಿಗೊಳಿಸಿ: ಕುಯಿಲಾಡಿ -Vishwanews24

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ 8ನೇ ವರ್ಷದ ಸಂಭ್ರಮಾಚರಣೆಯ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನ ಯಶಸ್ವಿಗೊಳಿಸಿ: ಕುಯಿಲಾಡಿ

ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರಕಾರವು ಕಳೆದ 2 ವರ್ಷಗಳಲ್ಲಿ ಉಚಿತ ಕೋವಿಡ್ ಲಸಿಕೆ ಹಾಗೂ ಪಡಿತರ ಮೂಲಕ ದೇಶವಾಸಿಗಳಿಗೆ ಆಹಾರ ಮತ್ತು ಆರೋಗ್ಯ ಭದ್ರತೆಯನ್ನು ಖಾತ್ರಿಪಡಿಸಿ ಅಭೂತಪೂರ್ವ ಸವಾಲುಗಳನ್ನು ಎದುರಿಸಿದೆ. ಸರಕಾರದ 8ನೇ ವರ್ಷದ ಸಾಧನೆಗಳನ್ನು ಆಚರಿಸುವ ಸಲುವಾಗಿ ಜಿಲ್ಲೆಯಾದ್ಯಂತ ಮೇ 30ರಿಂದ ಜೂನ್ 14ರ ವರೆಗೆ ನಡೆಯಲಿರುವ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನದ ವಿವಿಧ ಕಾರ್ಯಕ್ರಮಗಳ ಜಿಲ್ಲಾ ಮತ್ತು ಮಂಡಲಗಳ ಸಂಚಾಲಕರು ಮತ್ತು ಸಹ ಸಂಚಾಲಕರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾ ಮತ್ತು ಮಂಡಲಗಳ ತಂಡದ ಪ್ರಮುಖರ ಪಟ್ಟಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

‘ಸೇವೆ’ಯು ಸಾಂಕ್ರಾಮಿಕ ಸಮಯದಲ್ಲಿ ರಾಷ್ಟ್ರದ ಸೇವೆಗಾಗಿ ಪ್ರಧಾನಿ ಮೋದಿಯವರ ಅವಿರತ ಪ್ರಯತ್ನಗಳನ್ನು ಸೂಚಿಸುತ್ತದೆ. ‘ಸುಶಾಸನ’ ಉತ್ತಮ ಆಡಳಿತವನ್ನು ಖಾತ್ರಿಪಡಿಸಿಕೊಳ್ಳಲು ಪ್ರಧಾನಿ ಮೋದಿ ಸರಕಾರದ ವಿವಿಧ ಉಪಕ್ರಮಗಳನ್ನು ಸಂಕೇತಿಸುತ್ತದೆ. ‘ಬಡವರ ಕಲ್ಯಾಣ’ ಬಡವರ ಪರವಾದ ಕಟ್ಟ ಕಡೆಯ ವ್ಯಕ್ತಿಗೆ ಯೋಜನೆಗಳನ್ನು ತಲುಪಿಸಲು ಮತ್ತು ಬಡವರನ್ನು ಮುಖ್ಯವಾಹಿನಿಗೆ ತರಲು ಪ್ರಧಾನಿ ಮೋದಿಯವರ ಬದ್ಧತೆಯನ್ನು ಸೂಚಿಸುತ್ತದೆ ಎಂದು ಅವರು ಹೇಳಿದರು.

ಉಡುಪಿ ಜಿಲ್ಲೆಯು ಸಂಘಟನಾತ್ಮಕವಾಗಿ ಮುಂಚೂಣಿಯಲ್ಲಿದ್ದು ಈ ಹಿಂದೆಯೂ ಪಕ್ಷದ ಹಲವಾರು ಅಭಿಯಾನಗಳನ್ನು ಯಶಸ್ವಿಯಾಗಿ ನಿರ್ವಹಿಸಿದೆ.‌‌ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ನೂರಾರು ಜನಪರ ಯೋಜನೆಗಳು ಮತ್ತು ವಿಶಿಷ್ಟ ಸಾಧನೆಗಳೊಂದಿಗೆ ಯಶಸ್ವೀ 8 ವರ್ಷಗಳನ್ನು ಪೂರೈಸಿರುವ ಸಂಭ್ರಮಾಚರಣೆಯ ಪ್ರಯುಕ್ತ ಹಮ್ಮಿಕೊಂಡಿರುವ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನದ ಎಲ್ಲಾ ವಿಭಾಗಗಳ ಕಾರ್ಯಕ್ರಮಗಳು ಜಿಲ್ಲೆಯಾದ್ಯಂತ ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುವಂತೆ ಜಿಲ್ಲಾ ಮತ್ತು ಮಂಡಲಗಳ ತಂಡಗಳು ಬದ್ಧತೆಯಿಂದ ಶ್ರಮವಹಿಸಿ ಸೂಕ್ತ ಪೂರ್ವಸಿದ್ಧತೆಗಳೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕುಯಿಲಾಡಿ ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಸಂಘಟನಾತ್ಮಕ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ವೀಡಿಯೋ ಕಾನ್ಫರೆನ್ಸ್ ಮಾಧ್ಯಮದ ಮೂಲಕ ನೆರವೇರಿಸಿದ ಬೂತ್ ಸಶಕ್ತೀಕರಣದ ಉದ್ಘಾಟನೆಯ ನೇರ ಪ್ರಸಾರವನ್ನು ವೀಕ್ಷಿಸಲಾಯಿತು. ಸಭೆಯಲ್ಲಿ ಬೂತ್ ಸಶಕ್ತೀಕರಣದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಡುಪಿ ಜಿಲ್ಲಾ ವ್ಯಾಪ್ತಿಯ 15 ಮಂದಿ ಪ್ರಮುಖರ ತಂಡವನ್ನು ಘೋಷಿಸಲಾಯಿತು.

‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನದ ಜಿಲ್ಲಾ ಸಹ ಸಂಚಾಲಕ ಸದಾನಂದ ಉಪ್ಪಿನಕುದ್ರು ಅಭಿಯಾನದ ಜಿಲ್ಲಾ ಮತ್ತು ಮಂಡಲಗಳ ತಂಡದ ಜವಾಬ್ದಾರಿ ನಿರ್ವಹಣೆಯ ಬಗ್ಗೆ ವಿಸ್ತ್ರತ ಮಾಹಿತಿ ನೀಡಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಅಭಿಯಾನದ ಕಾರ್ಯಕ್ರಮಗಳ ವ್ಯವಸ್ಥಿತ ಆಯೋಜನೆಯ ಪೂರ್ವಸಿದ್ಧತೆಗಳ ಬಗ್ಗೆ ವಿಭಾಗವಾರು ಸಂಚಾಲಕರಿಂದ ಮಾಹಿತಿ ಪಡೆದರು.

ಪೂರ್ವಭಾವಿ ಸಭೆಯಲ್ಲಿ ಅಭಿಯಾನದ ಜಿಲ್ಲಾ ಹಾಗೂ ಮಂಡಲಗಳ ಸಂಚಾಲಕರು ಮತ್ತು ಸಹ ಸಂಚಾಲಕರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಉಪಸ್ಥಿತರಿದ್ದರು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

6 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

6 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

6 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

9 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

10 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

10 hours ago