ಕನ್ಯಾಕುಮಾರಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಮಿಳು ಸಂಸ್ಕೃತಿಯನ್ನು ಗೌರವಿಸುವುದಿಲ್ಲ. ತಮಿಳುನಾಡಿನ ಪ್ರತ್ಯೇಕ ಸಾಂಸ್ಕೃತಿಕ ಗುರುತನ್ನು ನಾಶ ಮಾಡುವ ಹುನ್ನಾರ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ .
ಕನ್ಯಾಕುಮಾರಿಯಲ್ಲಿ ಕಾಂಗ್ರೆಸ್ ರೋಡ್ ಶೋ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ತಮಿಳು ಸಂಸ್ಕೃತಿಯ ರಕ್ಷಣೆಯ ಜವಾಬ್ದಾರಿ ಹೊರಬೇಕಿದ್ದ ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ, ಪ್ರಧಾನಿ ಮೋದಿ ಬಯಸಿದ್ದನ್ನೇ ಮಾಡುತ್ತಾ ತಮಿಳು ಸಹೋದರರಿಗೆ ದ್ರೋಹ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.
ಕಾಂಗ್ರೆಸ್ ಪಕ್ಷವು ಇಡೀ ದೇಶದಲ್ಲಿ ಕುಸಿಯುತ್ತಿದೆ : ಅಮಿತ್ ಶಾ -Vishwanews24
ಪಳನಿಸ್ವಾಮಿ ಆರ್ಎಸ್ಎಸ್ಗೆ ತಮಿಳು ಸಂಸ್ಕೃತಿಯನ್ಜು ಅವಮಾನಿಸಲು ಯಾವುದೇ ಕಾರಣಕ್ಕೂ ಬಿಡಬಾರದು. ಆರ್ಎಸ್ಎಸ್ ಮೊದಲಿನಿಂದಲೂ ದ್ರಾವಿಡ ಸಂಸ್ಕೃತಿಯನ್ನು ತಿರಸ್ಕರಿಸುತ್ತಲೇ ಬಂದಿದ್ದು, ಎಐಎಡಿಎಂಕೆ ಹಾಗೂ ಬಿಜೆಪಿ ಮೈತ್ರಿಕೂಟದಿಂದ ತಮಿಳು ಸಂಸ್ಕೃತಿಗೆ ಮತ್ತಷ್ಟು ಹಾನಿಯಾಗಲಿರುವುದುಯ ಖಚಿತ ಎಂದು ರಾಹುಲ್ ಎಚ್ಚರಿಸಿದರು.
ಪ್ರಧಾನಿ ಮೋದಿ ಒಂದು ದೇಶ, ಒಂದು ಸಂಸ್ಕೃತಿ ಹಾಗೂ ಒಂದು ಇತಿಹಾಸದ ಕುರಿತು ಮಾತನಾಡುತ್ತಾರೆ. ಹಾಗಾದರೆ ತಮಿಳುನಾಡಿನ ಸಂಸ್ಕೃತಿ ಹಾಗೂ ಇತಿಹಾಸ ಭಾರತದ ಅವಿಭಾಜ್ಯ ಅಂಗವಲ್ಲವೇ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದರು.
ತಮಿಳುನಾಡು ತನ್ನದೇ ಆದ ವಿಶಿಷ್ಟ ಸಾಂಸ್ಕೃತಿಕ ಇತಿಹಾಸವನ್ನು ಹೊಂದಿದ್ದು, ಓರ್ವ ಭಾರತೀಯನಾಗಿ ಈ ಭವ್ಯ ಇತಿಹಾಸವನ್ನು ಕಾಪಾಡುವುದು ತಮ್ಮ ಜವಾಬ್ದಾರಿ ಎಂದು ರಾಹುಲ್ ಗಾಂಧಿ ಹೇಳಿದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…