Featured

ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಏಕಾಂಗಿಯಾಗಿ ಎದುರಿಸಲು ಕಾಂಗ್ರೆಸ್ ಗೆ ಸಾಧ್ಯವಿಲ್ಲ: ಕಾಂಗ್ರೆಸ್ ನ ಹಿರಿಯ ನಾಯಕ ಎ.ಕೆ ಆ್ಯಂಟನಿ

ತಿರುವನಂತಪುರ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಏಕಾಂಗಿಯಾಗಿ ಎದುರಿಸಲು ಸಾಧ್ಯವಿಲ್ಲ ಎಂಬುದನ್ನು ಕಾಂಗ್ರೆಸ್ ಅರ್ಥ ಮಾಡಿಕೊಂಡಿದೆ ಎಂದು ತಿರುವನಂತಪುರದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸುವಾಗ ಕಾಂಗ್ರೆಸ್ ನ ಹಿರಿಯ ನಾಯಕ ಮಾಜಿ ರಕ್ಷಣಾ ಸಚಿವ ಎ ಕೆ ಆಂಟನಿ ಹೇಳಿದ್ದಾರೆ.

ಕೇರಳದ ತಿರುವನಂತಪುರಂನಲ್ಲಿ ನಡೆದ ಸಮಾವೇಶದಲ್ಲಿ ಅವರು ಮಾತನಾಡಿದ್ದು, ಈ ಹೇಳಿಕೆಯು ಕಾಂಗ್ರೆಸ್ ವಲಯದಲ್ಲಿ ಅಸಮಧಾನ ಸೃಷ್ಟಿಸಿದೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ನಿಂದ ಮಾತ್ರ ನರೇಂದ್ರ ಮೋದಿಯವರನ್ನು ಅಧಿಕಾರದಿಂದ ಕೆಳಗಿಳಿಸಲು ಸಾಧ್ಯವಿಲ್ಲ. ಆದರೂ ಕೂಡ ಮೋದಿಯವರನ್ನು ಅಧಿಕಾರದಿಂದ ದೂರವಿಡಲು ಪ್ರಚಾರದಲ್ಲಿ ಕಾಂಗ್ರೆಸ್ ಪ್ರಮುಖ ಶಕ್ತಿಯಾಗಿದೆ. ಹೀಗಾಗಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಬೇರೆ ಪಕ್ಷಗಳೊಂದಿಗೆ ಕೈಜೋಡಿಸಲು ಮುಂದಾಗಿದೆ ಎಂದು  ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಹೇಳಿದ್ದರು.

ಚುನಾವಣೆ ಸಮೀಪಿಸುತ್ತಿರುವಾಗ ಕೊನೆ ಹಂತದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಅಭ್ಯಾಸವನ್ನು ಕಾಂಗ್ರೆಸ್ ಬಿಡಬೇಕು. ಅಭ್ಯರ್ಥಿಗಳ ಆಯ್ಕೆ ಜಿಲ್ಲಾ ಸಮಿತಿಯಿಂದ ನಿರ್ಧಾರವಾಗಬೇಕು. ಕೆಲ ನಾಯಕರು ತೀರ್ಮಾನಿಸುವ ಬದಲು ಅಭ್ಯರ್ಥಿಗಳ ಆಯ್ಕೆಯು ಪ್ರಜಾಸತ್ತಾತ್ಮಕವಾಗಿ ನಡೆಯಬೇಕು ಎಂದು ಅಭಿಪ್ರಾಯಪಟ್ಟರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

15 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

15 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

15 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

16 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

16 hours ago