Featured

ಪ್ರಧಾನಿ ಮೋದಿ – ಪೇಜಾವರ ಶ್ರೀ ಭೇಟಿ ; ಕೃಷ್ಣ ದರ್ಶನಕ್ಕೆ ಆಗಮಿಸುವಂತೆ ಶ್ರೀಗಳ ಆಹ್ವಾನ – Vishwanews24

ಉಡುಪಿ: ಪ್ರಧಾನಿ ಮೋದಿ – ಪೇಜಾವರ ಶ್ರೀ ಭೇಟಿ ; ಕೃಷ್ಣ ದರ್ಶನಕ್ಕೆ ಆಗಮಿಸುವಂತೆ ಶ್ರೀಗಳ ಆಹ್ವಾನ – Vishwanews24

ಉಡುಪಿ : ಅಯೋಧ್ಯೆ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆಗಿರುವ ಶ್ರೀ ಪೇಜಾವರ ಮಠಾಧೀಶ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ನವದೆಹಲಿಯಲ್ಲಿ ಸೋಮವಾರ ಸಂಜೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.‌ತಮ್ಮ ಗುರುಗಳಾದ ಕೀರ್ತಿಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಭಾರತ ಸರ್ಕಾರ ಮರಣೋತ್ತರವಾಗಿ ಘೋಷಿಸಿದ್ದ ಪದ್ಮವಿಭೂಷಣ ಪ್ರಶಸ್ತಿ ಯನ್ನು ಸ್ವೀಕರಿಸಲು ನವದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಶ್ರೀಗಳೊಂದಿಗೆ ಕುಶಲೋಪರಿ ನಡೆಸಿದ ಮೋದಿಯವರು ಶ್ರೀ ವಿಶ್ವೇಶತೀರ್ಥರನ್ನು ವಿಶೇಷವಾಗಿ ಸ್ಮರಿಸಿದರು.

ರಾಮಮಂದಿರ ನಿರ್ಮಾಣ ಕಾರ್ಯಗಳ ಪ್ರಗತಿಯ ಕುರಿತೂ ಇಬ್ಬರೂ ಸಮಾಲೋಚನೆ ನಡೆಸಿದ್ದಾರೆ

ಇದೇ ವೇಳೆ ನರೇಂದ್ರ ನೋದಿಯವರಿಗೆ ಯಕ್ಷಗಾನದ ಕೇದಗೆ ಮುಂಡಾಸಿನ ಕಿರೀಟ ತೊಡಿಸಿ ಜರತಾರಿ ಶಾಲು, ಬೆಳ್ಳಿಯ ತಟ್ಟೆಯಲ್ಲಿ ಉಡುಪಿ ಶ್ರೀ ಕೃಷ್ಣನ ಗಂಧ , ನಿರ್ಮಾಲ್ಯ ತುಳಸಿ ನೀಡಿ ಆಶೀರ್ವದಿಸಿದರು . ಉಡುಪಿಯ ಚಿತ್ರಕಲಾವಿದೆ ವಸಂತಲಕ್ಷ್ಮೀ ಹೆಬ್ಬಾರ್ ಅವರು ರಚಿಸಿದ ಮೋದಿಯವರು ಉಡುಪಿ ಕೃಷ್ಣನಿಗೆ ಕೈಮುಗಿಯುವ ಭಂಗಿಯ ಸುಂದವಾದ ತೈಲಚಿತ್ರ ಹಾಗೂ ಸಂಸ್ಕೃತ , ಕನ್ನಡ , ತುಳು ಲಿಪಿಗಳಲ್ಲಿ ನರೇಂದ್ರ ಮೋದಿಯವರ ಹೆಸರನ್ನು ಕೆತ್ತಿದ ಸ್ಮರಣಿಕೆಯನ್ನೂ ಶ್ರೀಗಳು ಪ್ರಧಾನಮಂತ್ರಿಯವರಿಗೆ ನೀಡಿದರು.

ಶೀಘ್ರ ಕೃಷ್ಣ ದರ್ಶನಕ್ಕೆ ಆಗಮಿಸುವಂತೆ ಶ್ರೀಗಳ ಆಹ್ವಾನ

ಇದೇ ವೇಳೆ ಪ್ರಧಾನಿ ಮೋದಿಯವರಿಗೆ ಉಡುಪಿ ಕೃಷ್ಣ ದರ್ಶನಕ್ಕೆ ಆಗಮಿಸುವಂತೆ ಶ್ರೀಗಳು ಆಹ್ವಾನ ನೀಡಿದ್ದು, ಇದೇ ವೇಳೆ ಶೀಘ್ರ ಉಡುಪಿಗೆ ಬರುವ ಆಶ್ವಾಸನೆಯಿತ್ತರು.

ಇನ್ನುಈ ಸಂದರ್ಭದಲ್ಲಿ , ದೇಶದಲ್ಲಿ ಗೋಹತ್ಯಾ ನಿಷೇಧ ಕಾನೂನು ಜಾರಿಗೊಳಿಸುವುದು , ದೇಶಾದ್ಯಂತ ಹಿಂದೂ ಶ್ರದ್ಧಾಕೇಂದ್ರಗಳನ್ನು ಸರ್ಕಾರಿ ವ್ಯವಸ್ಥೆಯಿಂದ ಸ್ವಾಯತ್ತಗೊಳಿಸುವುದು , ಮಹರ್ಷಿ ವೇದವ್ಯಾಸರ ಜಯಂತಿಯನ್ನು (ಆಷಾಢ ಪೂರ್ಣಿಮಾ ಅಥವಾ ಒಂದು ನಿರ್ದಿಷ್ಟ ದಿನಾಂಕವನ್ನು ) ” ತತ್ತ್ವಜ್ಞಾನ ದಿನ ” ಅಥವಾ ” ಅಧ್ಯಾತ್ಮ ದಿನ ” ಎಂದು ಘೋಷಿಸಿ ಸರ್ಕಾರಿ ಆಚರಣೆಗೆ ವ್ಯವಸ್ಥೆಗೊಳಿಸುವುದು , ಹಾಗೂ ತುಳು ಭಾಷೆಯನ್ನು ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವುದು ಎಂಬ ನಾಲ್ಕು ಅಪೇಕ್ಷೆಗಳನ್ನು ಲಿಖಿತವಾಗಿ ನೀಡಿದ್ದು ಈ ಬಗ್ಗೆಯೂ ಗಮನಹರಿಸುವುದಾಗಿ ಪ್ರಧಾನಿ ಭರವಸೆ ನೀಡಿದರು,

ಶ್ರೀ ಪೇಜಾವರ ಮಠದ ದಿವಾನರಾದ ಎಂ ರಘುರಾಮಾಚಾರ್ಯ , ಡಿ ಪಿ ಅನಂತ್ , ಸಾಮಾಜಿಕ ಕಾರ್ಯಕರ್ತ ಶ್ರೀಗಳ ಆಪ್ತ ವಾಸುದೇವ ಭಟ್ ಪೆರಂಪಳ್ಳಿ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago