Featured

ಪ್ರಧಾನಿ ಮೋದಿ – ಪೇಜಾವರ ಶ್ರೀ ಭೇಟಿ ; ಕೃಷ್ಣ ದರ್ಶನಕ್ಕೆ ಆಗಮಿಸುವಂತೆ ಶ್ರೀಗಳ ಆಹ್ವಾನ – Vishwanews24

ಉಡುಪಿ: ಪ್ರಧಾನಿ ಮೋದಿ – ಪೇಜಾವರ ಶ್ರೀ ಭೇಟಿ ; ಕೃಷ್ಣ ದರ್ಶನಕ್ಕೆ ಆಗಮಿಸುವಂತೆ ಶ್ರೀಗಳ ಆಹ್ವಾನ – Vishwanews24

ಉಡುಪಿ : ಅಯೋಧ್ಯೆ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆಗಿರುವ ಶ್ರೀ ಪೇಜಾವರ ಮಠಾಧೀಶ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ನವದೆಹಲಿಯಲ್ಲಿ ಸೋಮವಾರ ಸಂಜೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.‌ತಮ್ಮ ಗುರುಗಳಾದ ಕೀರ್ತಿಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಭಾರತ ಸರ್ಕಾರ ಮರಣೋತ್ತರವಾಗಿ ಘೋಷಿಸಿದ್ದ ಪದ್ಮವಿಭೂಷಣ ಪ್ರಶಸ್ತಿ ಯನ್ನು ಸ್ವೀಕರಿಸಲು ನವದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಶ್ರೀಗಳೊಂದಿಗೆ ಕುಶಲೋಪರಿ ನಡೆಸಿದ ಮೋದಿಯವರು ಶ್ರೀ ವಿಶ್ವೇಶತೀರ್ಥರನ್ನು ವಿಶೇಷವಾಗಿ ಸ್ಮರಿಸಿದರು.

ರಾಮಮಂದಿರ ನಿರ್ಮಾಣ ಕಾರ್ಯಗಳ ಪ್ರಗತಿಯ ಕುರಿತೂ ಇಬ್ಬರೂ ಸಮಾಲೋಚನೆ ನಡೆಸಿದ್ದಾರೆ

ಇದೇ ವೇಳೆ ನರೇಂದ್ರ ನೋದಿಯವರಿಗೆ ಯಕ್ಷಗಾನದ ಕೇದಗೆ ಮುಂಡಾಸಿನ ಕಿರೀಟ ತೊಡಿಸಿ ಜರತಾರಿ ಶಾಲು, ಬೆಳ್ಳಿಯ ತಟ್ಟೆಯಲ್ಲಿ ಉಡುಪಿ ಶ್ರೀ ಕೃಷ್ಣನ ಗಂಧ , ನಿರ್ಮಾಲ್ಯ ತುಳಸಿ ನೀಡಿ ಆಶೀರ್ವದಿಸಿದರು . ಉಡುಪಿಯ ಚಿತ್ರಕಲಾವಿದೆ ವಸಂತಲಕ್ಷ್ಮೀ ಹೆಬ್ಬಾರ್ ಅವರು ರಚಿಸಿದ ಮೋದಿಯವರು ಉಡುಪಿ ಕೃಷ್ಣನಿಗೆ ಕೈಮುಗಿಯುವ ಭಂಗಿಯ ಸುಂದವಾದ ತೈಲಚಿತ್ರ ಹಾಗೂ ಸಂಸ್ಕೃತ , ಕನ್ನಡ , ತುಳು ಲಿಪಿಗಳಲ್ಲಿ ನರೇಂದ್ರ ಮೋದಿಯವರ ಹೆಸರನ್ನು ಕೆತ್ತಿದ ಸ್ಮರಣಿಕೆಯನ್ನೂ ಶ್ರೀಗಳು ಪ್ರಧಾನಮಂತ್ರಿಯವರಿಗೆ ನೀಡಿದರು.

ಶೀಘ್ರ ಕೃಷ್ಣ ದರ್ಶನಕ್ಕೆ ಆಗಮಿಸುವಂತೆ ಶ್ರೀಗಳ ಆಹ್ವಾನ

ಇದೇ ವೇಳೆ ಪ್ರಧಾನಿ ಮೋದಿಯವರಿಗೆ ಉಡುಪಿ ಕೃಷ್ಣ ದರ್ಶನಕ್ಕೆ ಆಗಮಿಸುವಂತೆ ಶ್ರೀಗಳು ಆಹ್ವಾನ ನೀಡಿದ್ದು, ಇದೇ ವೇಳೆ ಶೀಘ್ರ ಉಡುಪಿಗೆ ಬರುವ ಆಶ್ವಾಸನೆಯಿತ್ತರು.

ಇನ್ನುಈ ಸಂದರ್ಭದಲ್ಲಿ , ದೇಶದಲ್ಲಿ ಗೋಹತ್ಯಾ ನಿಷೇಧ ಕಾನೂನು ಜಾರಿಗೊಳಿಸುವುದು , ದೇಶಾದ್ಯಂತ ಹಿಂದೂ ಶ್ರದ್ಧಾಕೇಂದ್ರಗಳನ್ನು ಸರ್ಕಾರಿ ವ್ಯವಸ್ಥೆಯಿಂದ ಸ್ವಾಯತ್ತಗೊಳಿಸುವುದು , ಮಹರ್ಷಿ ವೇದವ್ಯಾಸರ ಜಯಂತಿಯನ್ನು (ಆಷಾಢ ಪೂರ್ಣಿಮಾ ಅಥವಾ ಒಂದು ನಿರ್ದಿಷ್ಟ ದಿನಾಂಕವನ್ನು ) ” ತತ್ತ್ವಜ್ಞಾನ ದಿನ ” ಅಥವಾ ” ಅಧ್ಯಾತ್ಮ ದಿನ ” ಎಂದು ಘೋಷಿಸಿ ಸರ್ಕಾರಿ ಆಚರಣೆಗೆ ವ್ಯವಸ್ಥೆಗೊಳಿಸುವುದು , ಹಾಗೂ ತುಳು ಭಾಷೆಯನ್ನು ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವುದು ಎಂಬ ನಾಲ್ಕು ಅಪೇಕ್ಷೆಗಳನ್ನು ಲಿಖಿತವಾಗಿ ನೀಡಿದ್ದು ಈ ಬಗ್ಗೆಯೂ ಗಮನಹರಿಸುವುದಾಗಿ ಪ್ರಧಾನಿ ಭರವಸೆ ನೀಡಿದರು,

ಶ್ರೀ ಪೇಜಾವರ ಮಠದ ದಿವಾನರಾದ ಎಂ ರಘುರಾಮಾಚಾರ್ಯ , ಡಿ ಪಿ ಅನಂತ್ , ಸಾಮಾಜಿಕ ಕಾರ್ಯಕರ್ತ ಶ್ರೀಗಳ ಆಪ್ತ ವಾಸುದೇವ ಭಟ್ ಪೆರಂಪಳ್ಳಿ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

28 minutes ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

23 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

23 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

24 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago