Featured

ಪ್ರಧಾನಿ ಮೋದಿ ಬಳಿಕ ಉಂಟಾಗುವ ರಾಜಕೀಯ ಕೋಲಾಹಲದಲ್ಲಿ ಬಿಜೆಪಿ ಉಳಿಯಲು ಸಾಧ್ಯವಿಲ್ಲ : ವೀರಪ್ಪ ಮೊಯ್ಲಿ – Vishwanews24

ಪ್ರಧಾನಿ  ಮೋದಿ ಅವರ ನಂತರ ಉಂಟಾಗುವ ರಾಜಕೀಯ ಕೋಲಾಹಲದಲ್ಲಿ ಬಿಜೆಪಿ ಉಳಿಯಲು ಸಾಧ್ಯವಿಲ್ಲ

ಬಿಜೆಪಿ ಮತ್ತು ಇತರೆ ಪಕ್ಷಗಳು ನಡುವೆ ಬರುವ ಪ್ರಯಾಣಿಕರಂತೆ..

ಇಲ್ಲಿ ಕೊನೆಯವರೆಗೂ ಉಳಿಯುವುದು ಕಾಂಗ್ರೆಸ್ ಮಾತ್ರ..

ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಒಳಗೆ ಸುಧಾರಣೆಯನ್ನು ಬಯಸಿದ್ದಾರೆ.

ಹೊಸದಿಲ್ಲಿ: ಪಕ್ಷದ ನಾಯಕತ್ವದ ವಿರುದ್ಧ ಬಂಡಾಯವೆದ್ದಿರುವ ಜಿ-23 ಗುಂಪಿನ ಸದಸ್ಯರ ವಿರುದ್ಧ ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ವಾಗ್ದಾಳಿ ನಡೆಸಿದ್ದಾರೆ. ಈ ಮುಖಂಡರು ಸೋನಿಯಾ ಗಾಂಧಿ ಅವರನ್ನು ಗುರಿ ಮಾಡುತ್ತಿದ್ದಾರೆ ಮತ್ತು ಪಕ್ಷವನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

“ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಒಳಗೆ ಸುಧಾರಣೆಯನ್ನು ಬಯಸಿದ್ದಾರೆ. ಆದರೆ ಅವರ ಸುತ್ತಲಿನ ಜನರು ಅದನ್ನು ಹಾಳು ಮಾಡುತ್ತಿದ್ದಾರೆ. ಜಿ-23 ಮುಖಂಡರು ಹಿರಿಯ ನಾಯಕಿಯನ್ನು ಗುರಿ ಮಾಡುತ್ತಿದ್ದಾರೆ ಹಾಗೂ ಪಕ್ಷವನ್ನು ದುರ್ಬಲಗೊಳಿಸುತ್ತಿದ್ದಾರೆ. ಬಿಜೆಪಿ ಚಿರಸ್ಥಾಯಿ ಪಕ್ಷವೇನಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ನಂತರ ಉಂಟಾಗುವ ರಾಜಕೀಯ ಕೋಲಾಹಲದಲ್ಲಿ ಅದು ಉಳಿಯಲು ಸಾಧ್ಯವಿಲ್ಲ” ಎಂದು ಮೊಯ್ಲಿ ಹೇಳಿದ್ದಾರೆ.

“ನಾವು ಅಧಿಕಾರದಲ್ಲಿ ಇಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ನಾಯಕರು ಅಥವಾ ಕಾರ್ಯಕರ್ತರು ಆತಂಕ ಪಡುವ ಅಗತ್ಯವಿಲ್ಲ. ಬಿಜೆಪಿ ಮತ್ತು ಇತರೆ ಪಕ್ಷಗಳು ನಡುವೆ ಬರುವ ಪ್ರಯಾಣಿಕರಂತೆ. ಅವರು ಬರುತ್ತಾರೆ ಮತ್ತು ಹೋಗುತ್ತಾರೆ. ಆದರೆ ಇಲ್ಲಿ ಕೊನೆಯವರೆಗೂ ಉಳಿಯುವುದು ಕಾಂಗ್ರೆಸ್ ಮಾತ್ರ. ನಾವು ದೀನರಿಗೆ ಬದ್ಧರಾಗಿರಬೇಕು ಮತ್ತು ಭರವಸೆ ಕಳೆದುಕೊಳ್ಳಬಾರದು” ಎಂದು ಅವರು ತಿಳಿಸಿದ್ದಾರೆ.

ಜಿ-23 ನಾಯಕರು ಪಕ್ಷವನ್ನು ಇಬ್ಭಾಗ ಮಾಡಲು ಬಯಸಿದ್ದಾರೆ ಎಂಬ ವರದಿಗಳಿಗೆ ಪ್ರತಿಕ್ರಿಯಿಸಿರುವ ಮೊಯ್ಲಿ, “ಎರಡು ಸಮಾನಾಂತರ ಕಾಂಗ್ರೆಸ್ ಇರಲು ಸಾಧ್ಯವಿಲ್ಲ. ನಾವು ಏನೇ ಮಾಡಿದರೂ ಅದನ್ನು ಪಕ್ಷದ ವೇದಿಕೆಯಲ್ಲಿಯೇ ಮಾಡಬೇಕು. ಅವರು ಸುಧಾರಣೆಗೆ ಸಲಹೆ ನೀಡಿದ್ದರು ಮತ್ತು ಮನವಿ ಸಲ್ಲಿಸಿದ್ದರು. ಅವರು ನಾಯಕತ್ವದ ಜತೆ ಚರ್ಚೆ ನಡೆಸಬೇಕಿತ್ತು. ನಾವು ನಾಯಕತ್ವವನ್ನು ಖಂಡಿಸುವ ಅಥವಾ ಟಾರ್ಗೆಟ್ ಮಾಡುವುದನ್ನು ಆರಂಭಿಸಬಾರದು. ಅವರು ಜಿ-23 ಅನ್ನು ಸಂಸ್ಥೀಕರಿಸಬಾರದು. ನಾನು ಅದರ ಜತೆ ನಂಟು ಹೊಂದಿಲ್ಲ” ಎಂದಿದ್ದಾರೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

12 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

12 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

13 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

13 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

13 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago