Featured

ಪ್ರಧಾನಿ ಮೋದಿ ಭಯಪಡುವ ಏಕೈಕ ನಾಯಕನೆಂದರೆ ಅದು ರಾಹುಲ್ ಗಾಂಧಿ : ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ -Vishwanews24

ಪ್ರಧಾನಿ ಮೋದಿ ಭಯಪಡುವ ಏಕೈಕ ನಾಯಕನೆಂದರೆ ಅದು ರಾಹುಲ್ ಗಾಂಧಿ : ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ -Vishwanews24

ರಾಹುಲ್ ಗಾಂಧಿ  ಸಮರ್ಥವಾಗಿ ಪಕ್ಷವನ್ನು ಮುನ್ನಡೆಸಬಹುದು ಮತ್ತು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಹೋರಾಡಬಹುದು ..

ಗುವಾಹಟಿ: ಇಂದು ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆಯೂ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದು, ಈಗಾಗಲೇ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಂಗಾಮಿ ಅಧ್ಯಕ್ಷೆಯಾಗಿದ್ದಂತ ಸೋನಿಯಾ ಗಾಂಧಿಯವರು ರಾಜೀನಾಮೆ ಸಲ್ಲಿದ್ದಾರೆ. ಈ ನಡುವೆ ಅಸ್ಸಾಂ ಕಾಂಗ್ರೆಸ್ ಹಿರಿಯ ಮುಖಂಡರೊಬ್ಬರು ಪಕ್ಷದ ನಾಯಕತ್ವವನ್ನು ರಾಹುಲ್ ಗಾಂಧಿಗೆ ಹಸ್ತಾಂತರಿಸಬೇಕು ಎಂದು ಒತ್ತಾಯ ಮಾಡಿದ್ದು , “ಪ್ರಧಾನಿ ಮೋದಿ ನರೇಂದ್ರ ಮೋದಿ ಭಯಪಡುವ, ಏಕೈಕ ನಾಯಕನೆಂದರೆ ಅದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ” ಎಂದು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ರಿಪುನ್ ಬೋರಾ, “ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಜ್ಯಸಭಾ ಸಂಸದರೊಂದಿಗೆ ಈ ಹಿಂದೆ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ,ಕಾಂಗ್ರೆಸ್ ಪಕ್ಷದ ನಾಯಕತ್ವವನ್ನು ರಾಹುಲ್ ಗಾಂಧಿಗೆ ನೀಡುವಂತೆ ಸೋನಿಯಾ ಗಾಂಧಿಗೆ ಮನವಿ ಮಾಡಿದ್ದೇನೆ. ಯಾಕೆಂದರೆ ನರೇಂದ್ರ ಮೋದಿ ಭಯಭೀತರಾಗುವುದು . ರಾಹುಲ್ ಗಾಂಧಿಯವರ ಮಾತ್ರ ಎಂದು ವಿವರಿಸಿದ್ದಾರೆ.

ಪಕ್ಷದ ನಾಯಕತ್ವವನ್ನು ಪ್ರಶ್ನಿಸಿ ಕೆಲವು ಹಿರಿಯ ಕಾಂಗ್ರೆಸ್ ಮುಖಂಡರು ಸೋನಿಯಾ ಗಾಂಧಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಬೋರಾ ಅವರು ತಮ್ಮ ಅಭಿಪ್ರಾಯಗಳು ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರ ಜವಾಬ್ದಾರಿಯನ್ನು ರಾಹುಲ್ ಗಾಂಧಿಗೆ ನೀಡುವಂತೆ ಕೋರಿ ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥರು ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದು, ರಾಹುಲ್ ಗಾಂಧಿ ಅವರಿಗೆ ನಾಯಕತ್ವ ನೀಡಿದರೆ ಸಮರ್ಥವಾಗಿ ಪಕ್ಷವನ್ನು ಮುನ್ನಡೆಸಬಹುದು ಮತ್ತು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಹೋರಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಮೈಸೂರು: ಮದುವೆ ನಿಶ್ಚಯವಾಗಿದ್ದ SBI ಉದ್ಯೋಗಿಗಳಿಬ್ಬರು ಆತ್ಮಹತ್ಯೆಗೆ ಶರಣು – vishwanews24

ಮೈಸೂರು: ಮದುವೆ ನಿಶ್ಚಯವಾಗಿದ್ದ SBI ಉದ್ಯೋಗಿಗಳಿಬ್ಬರು ಆತ್ಮಹತ್ಯೆಗೆ ಶರಣು ಮೈಸೂರು: ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ SBI ಉದ್ಯೋಗಿಗಳಿಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆಗೆ…

7 minutes ago

ಬಂಟ್ವಾಳ : ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿದ ವಿದ್ಯಾರ್ಥಿಗೆ ಸಿಎಂ ಮೆಚ್ಚುಗೆ – vishwanews24

ಬಂಟ್ವಾಳ : ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿದ ವಿದ್ಯಾರ್ಥಿಗೆ ಸಿಎಂ ಮೆಚ್ಚುಗೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು…

17 minutes ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಜಿಲ್ಲಾಡಳಿತದ ಕ್ರಮಕ್ಕೆ ಕಾಪು ಬಿಜೆಪಿ ತೀವ್ರ ಖಂಡನೆ – vishwanews24

ಸಂಘಪರಿವಾರದ ಪ್ರಮುಖರಿಗೆ ನಿರ್ಬಂಧ ವಿಧಿಸಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾದ ಕ್ರಮ .. ನಿರ್ಬಂಧಗಳ ಮೂಲಕ ಸಂಘಪರಿವಾರದ ಮುಖಂಡರ ರಾಷ್ಟ್ರಭಕ್ತಿ ಮತ್ತು…

33 minutes ago

ಶಿರ್ವ ಡೇವಿಡ್‌ ಡಿ’ಸೋಜಾ ಕೊಲೆ ಪ್ರಕರಣಕ್ಕೆ ಶೀಘ್ರವೇ ತಾರ್ಕಿಕ ಅಂತ್ಯ – vishwanews24

ತಾರ್ಕಿಕ ಅಂತ್ಯ ಕಾಣಲಿರುವ ಶಿರ್ವ ಡೇವಿಡ್‌ ಡಿ'ಸೋಜಾ ಕೊಲೆ ಪ್ರಕರಣ ಹೊರ ರಾಜ್ಯದಲ್ಲಿ ಮಧ್ಯವರ್ತಿಯ ಹುಡುಕಾಟ ..  ಪೊಲೀಸರಿಂದ ಆರೋಪಿಗಳ…

46 minutes ago

ಬಿ.ಪಿ.ಎಲ್. ಪಡಿತರ ಚೀಟಿ ಆದಾಯ ಮಿತಿ ರೂ. 3 ಲಕ್ಷಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ – vishwanews24

ಬಿ.ಪಿ.ಎಲ್. ಪಡಿತರ ಚೀಟಿ ಆದಾಯ ಮಿತಿ ರೂ. 3 ಲಕ್ಷಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಉಡುಪಿ:…

58 minutes ago

ಪ್ರೇಯಸಿ ಆತ್ಮಹತ್ಯೆ ಸುದ್ದಿ ತಿಳಿದು ನೇಣಿಗೆ ಶರಣಾದ ಪ್ರಿಯಕರ – vishwanews24

ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ವಿಷ ಸೇವಿಸಿದ್ದ ಯುವತಿ.. ಪ್ರೇಯಸಿ ಆತ್ಮಹತ್ಯೆ ಸುದ್ದಿ ತಿಳಿದು ನೇಣಿಗೆ ಶರಣಾದ ಪ್ರಿಯಕರ ಧಾರವಾಡ: ಪ್ರೇಯಸಿ…

1 hour ago