Featured

ಪ್ರಧಾನಿ ಮೋದಿ ಭಾರತ ದೇಶದ ಹೆಮ್ಮೆ , ದೇಶದ ಜನರು ಪ್ರಧಾನಿಯನ್ನು ನೋಡಿ ಹಲವು ವಿಷಯಗಳನ್ನು ಕಲಿಯಬೇಕಿದೆ : ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ -Vishwanews24

ಪ್ರಧಾನಿ ಮೋದಿ ಭಾರತ ದೇಶದ ಹೆಮ್ಮೆ , ದೇಶದ ಜನರು ಪ್ರಧಾನಿಯನ್ನು ನೋಡಿ ಹಲವು ವಿಷಯಗಳನ್ನು ಕಲಿಯಬೇಕಿದೆ : ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ -Vishwanews24

ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ಭಾರತ ದೇಶದ ಹೆಮ್ಮೆ. ಅವರು ತನ್ನ ಹಿಂದಿನ ದಿನಗಳ ಕುರಿತು ಮುಚ್ಚಿಡದೇ ಎಲ್ಲವನ್ನು ಹೇಳಿಕೊಂಡಿದ್ದಾರೆ ಎನ್ನುವ ಮೂಲಕ ಜಮ್ಮು ಕಾಶ್ಮೀರದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ಪ್ರಧಾನಿ ಮೋದಿ ಅವರನ್ನು ಗುಣಗಾನ ಮಾಡಿದ್ದಾರೆ.

ಕೊರೊನಾ ಲಸಿಕೆ ಹಾಕಿಸಿಕೊಂಡ ಪ್ರಧಾನಿ ಮೋದಿ , ಎಲ್ಲರೂ ಲಸಿಕೆ ತೆಗೆದುಕೊಳ್ಳುವಂತೆ ಮನವಿ -Vishwanews24

ಗುಜ್ಜರ್ ಚಾರಿಟೇಬಲ್ ಟ್ರಸ್ಟ್ ಕಾರ್ಯಕ್ರಮದಲ್ಲಿ ಮಾತನಾಡಿದ ಆಜಾದ್, ನಾನು ನಮ್ಮ ದೇಶದ ಹಲವು ನಾಯಕರ ಬಗ್ಗೆ ಹೆಮ್ಮೆ ಪಡುತ್ತೇನೆ. ಅದರಲ್ಲೂ ನನ್ನಂತೆ ಗ್ರಾಮೀಣ ಪ್ರದೇಶಗಳಿಂದ ಬಂದು ರಾಜಕೀಯದಲ್ಲಿರುವವರು ಹಲವು ನಾಯಕರಿದ್ದಾರೆ. ನಮ್ಮ ದೇಶದ ಪ್ರಧಾನಿ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ ದೇಶದ ಜನರು ಪ್ರಧಾನಿಯನ್ನು ನೋಡಿ ಹಲವು ವಿಷಯಗಳನ್ನು ಕಲಿಯಬೇಕಿದೆ. ಅವರು ಪ್ರಧಾನಿಯಾಗಿದ್ದರೂ ತಮ್ಮ ಹಿಂದಿನದಿನಗಳಲ್ಲಿ ಚಹಾ ಮಾರಾಟ ಮಾಡುತ್ತಿದ್ದ ಬಗ್ಗೆ ಹೆಮ್ಮೆಯಿಂದ ನಾನು ಚಾಯ್ ವಾಲಾ ಎಂದುಕೊಂಡಿದ್ದಾರೆ. ಮೋದಿ ತನ್ನ ಹಿಂದಿನ ಕಾಯಕವನ್ನು ಮುಚ್ಚುಮರೆಯಿಲ್ಲದೆ ಹೇಳಿಕೊಂಡಿರುವುವು ಅವರ ಒಳ್ಳೆಯ ಗುಣ ಎಂದಿದ್ದಾರೆ.

ಮಂಗಳೂರು: ಮದುವೆಯ ಮರುದಿನ ಹೃದಯಾಘಾತದಿಂದ ಮೃತಪಟ್ಟ ಮದುಮಗಳು -Vishwanews24

ಕೊರೊನಾ ಮತ್ತು ಅರ್ಟಿಕಲ್ 370 ರಿಂದ ಜಮ್ಮು ಕಾಶ್ಮೀರ ಆರ್ಥಿಕವಾಗಿ ಕುಸಿದಿದೆ. ಇದರಿಂದ ಜಮ್ಮು ಕಾಶ್ಮೀರಕ್ಕೆ ಹೆಚ್ಚಿನ ಒತ್ತು ನೀಡಿ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಬೇಕಾಗಿದೆ. ಹಾಗೂ ಹೆಚ್ಚಿನ ಅನುದಾನವನ್ನು ನೀಡಿ ಕೈಗಾರಿಕೆಗಳನ್ನು ಬಲಪಡಿಸಬೇಕು ಎಂದು ಅಭಿಪ್ರಾಯಪಟ್ಟರು.

ಕೆಲದಿನಗಳ ಹಿಂದೆ ರಾಜ್ಯಸಭೆಯಿಂದ ನಿವೃತ್ತಿಯಾದ ಆಜಾದ್ ಅವರ ಕೆಲಸವನ್ನು ಶ್ಲಾಘಿಸಿ ಪ್ರಧಾನಿ ಮೋದಿ ಭಾವುಕರಾಗಿ ಕಣ್ಣೀರು ಹಾಕಿದ್ದರು.

ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಅಸಮಾಧಾನ ಹೊಂದಿರುವ 23 ಸದಸ್ಯರ ಗುಂಪಿನಲ್ಲಿರುವ ಆಜಾದ್ ಈಗಾಗಲೇ ಪಕ್ಷವನ್ನು ಆರಂಭದಿಂದ ಸಂಘಟಿಸಬೇಕು ಎಂದು ಹೇಳುತ್ತಿದ್ದಾರೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿ ಹೈಕಮಾಂಡ್ ನಾಯಕರೇ ಹುಬ್ಬೇರುವಂತೆ ಮಾಡಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

8 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

8 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

9 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

9 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

9 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

9 hours ago