Featured

ಪ್ರಧಾನಿ ಮೋದಿ ಭಾರತ ದೇಶದ ಹೆಮ್ಮೆ , ದೇಶದ ಜನರು ಪ್ರಧಾನಿಯನ್ನು ನೋಡಿ ಹಲವು ವಿಷಯಗಳನ್ನು ಕಲಿಯಬೇಕಿದೆ : ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ -Vishwanews24

ಪ್ರಧಾನಿ ಮೋದಿ ಭಾರತ ದೇಶದ ಹೆಮ್ಮೆ , ದೇಶದ ಜನರು ಪ್ರಧಾನಿಯನ್ನು ನೋಡಿ ಹಲವು ವಿಷಯಗಳನ್ನು ಕಲಿಯಬೇಕಿದೆ : ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ -Vishwanews24

ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ಭಾರತ ದೇಶದ ಹೆಮ್ಮೆ. ಅವರು ತನ್ನ ಹಿಂದಿನ ದಿನಗಳ ಕುರಿತು ಮುಚ್ಚಿಡದೇ ಎಲ್ಲವನ್ನು ಹೇಳಿಕೊಂಡಿದ್ದಾರೆ ಎನ್ನುವ ಮೂಲಕ ಜಮ್ಮು ಕಾಶ್ಮೀರದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ಪ್ರಧಾನಿ ಮೋದಿ ಅವರನ್ನು ಗುಣಗಾನ ಮಾಡಿದ್ದಾರೆ.

ಕೊರೊನಾ ಲಸಿಕೆ ಹಾಕಿಸಿಕೊಂಡ ಪ್ರಧಾನಿ ಮೋದಿ , ಎಲ್ಲರೂ ಲಸಿಕೆ ತೆಗೆದುಕೊಳ್ಳುವಂತೆ ಮನವಿ -Vishwanews24

ಗುಜ್ಜರ್ ಚಾರಿಟೇಬಲ್ ಟ್ರಸ್ಟ್ ಕಾರ್ಯಕ್ರಮದಲ್ಲಿ ಮಾತನಾಡಿದ ಆಜಾದ್, ನಾನು ನಮ್ಮ ದೇಶದ ಹಲವು ನಾಯಕರ ಬಗ್ಗೆ ಹೆಮ್ಮೆ ಪಡುತ್ತೇನೆ. ಅದರಲ್ಲೂ ನನ್ನಂತೆ ಗ್ರಾಮೀಣ ಪ್ರದೇಶಗಳಿಂದ ಬಂದು ರಾಜಕೀಯದಲ್ಲಿರುವವರು ಹಲವು ನಾಯಕರಿದ್ದಾರೆ. ನಮ್ಮ ದೇಶದ ಪ್ರಧಾನಿ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ ದೇಶದ ಜನರು ಪ್ರಧಾನಿಯನ್ನು ನೋಡಿ ಹಲವು ವಿಷಯಗಳನ್ನು ಕಲಿಯಬೇಕಿದೆ. ಅವರು ಪ್ರಧಾನಿಯಾಗಿದ್ದರೂ ತಮ್ಮ ಹಿಂದಿನದಿನಗಳಲ್ಲಿ ಚಹಾ ಮಾರಾಟ ಮಾಡುತ್ತಿದ್ದ ಬಗ್ಗೆ ಹೆಮ್ಮೆಯಿಂದ ನಾನು ಚಾಯ್ ವಾಲಾ ಎಂದುಕೊಂಡಿದ್ದಾರೆ. ಮೋದಿ ತನ್ನ ಹಿಂದಿನ ಕಾಯಕವನ್ನು ಮುಚ್ಚುಮರೆಯಿಲ್ಲದೆ ಹೇಳಿಕೊಂಡಿರುವುವು ಅವರ ಒಳ್ಳೆಯ ಗುಣ ಎಂದಿದ್ದಾರೆ.

ಮಂಗಳೂರು: ಮದುವೆಯ ಮರುದಿನ ಹೃದಯಾಘಾತದಿಂದ ಮೃತಪಟ್ಟ ಮದುಮಗಳು -Vishwanews24

ಕೊರೊನಾ ಮತ್ತು ಅರ್ಟಿಕಲ್ 370 ರಿಂದ ಜಮ್ಮು ಕಾಶ್ಮೀರ ಆರ್ಥಿಕವಾಗಿ ಕುಸಿದಿದೆ. ಇದರಿಂದ ಜಮ್ಮು ಕಾಶ್ಮೀರಕ್ಕೆ ಹೆಚ್ಚಿನ ಒತ್ತು ನೀಡಿ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಬೇಕಾಗಿದೆ. ಹಾಗೂ ಹೆಚ್ಚಿನ ಅನುದಾನವನ್ನು ನೀಡಿ ಕೈಗಾರಿಕೆಗಳನ್ನು ಬಲಪಡಿಸಬೇಕು ಎಂದು ಅಭಿಪ್ರಾಯಪಟ್ಟರು.

ಕೆಲದಿನಗಳ ಹಿಂದೆ ರಾಜ್ಯಸಭೆಯಿಂದ ನಿವೃತ್ತಿಯಾದ ಆಜಾದ್ ಅವರ ಕೆಲಸವನ್ನು ಶ್ಲಾಘಿಸಿ ಪ್ರಧಾನಿ ಮೋದಿ ಭಾವುಕರಾಗಿ ಕಣ್ಣೀರು ಹಾಕಿದ್ದರು.

ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಅಸಮಾಧಾನ ಹೊಂದಿರುವ 23 ಸದಸ್ಯರ ಗುಂಪಿನಲ್ಲಿರುವ ಆಜಾದ್ ಈಗಾಗಲೇ ಪಕ್ಷವನ್ನು ಆರಂಭದಿಂದ ಸಂಘಟಿಸಬೇಕು ಎಂದು ಹೇಳುತ್ತಿದ್ದಾರೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿ ಹೈಕಮಾಂಡ್ ನಾಯಕರೇ ಹುಬ್ಬೇರುವಂತೆ ಮಾಡಿದ್ದಾರೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

8 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

8 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

9 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

9 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

9 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

10 hours ago