Featured

ಪ್ರಧಾನಿ ಮೋದಿ ಭಾರತ ದೇಶದ ಹೆಮ್ಮೆ , ದೇಶದ ಜನರು ಪ್ರಧಾನಿಯನ್ನು ನೋಡಿ ಹಲವು ವಿಷಯಗಳನ್ನು ಕಲಿಯಬೇಕಿದೆ : ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ -Vishwanews24

ಪ್ರಧಾನಿ ಮೋದಿ ಭಾರತ ದೇಶದ ಹೆಮ್ಮೆ , ದೇಶದ ಜನರು ಪ್ರಧಾನಿಯನ್ನು ನೋಡಿ ಹಲವು ವಿಷಯಗಳನ್ನು ಕಲಿಯಬೇಕಿದೆ : ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ -Vishwanews24

ಶ್ರೀನಗರ: ಪ್ರಧಾನಿ ನರೇಂದ್ರ ಮೋದಿ ಭಾರತ ದೇಶದ ಹೆಮ್ಮೆ. ಅವರು ತನ್ನ ಹಿಂದಿನ ದಿನಗಳ ಕುರಿತು ಮುಚ್ಚಿಡದೇ ಎಲ್ಲವನ್ನು ಹೇಳಿಕೊಂಡಿದ್ದಾರೆ ಎನ್ನುವ ಮೂಲಕ ಜಮ್ಮು ಕಾಶ್ಮೀರದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ಪ್ರಧಾನಿ ಮೋದಿ ಅವರನ್ನು ಗುಣಗಾನ ಮಾಡಿದ್ದಾರೆ.

ಕೊರೊನಾ ಲಸಿಕೆ ಹಾಕಿಸಿಕೊಂಡ ಪ್ರಧಾನಿ ಮೋದಿ , ಎಲ್ಲರೂ ಲಸಿಕೆ ತೆಗೆದುಕೊಳ್ಳುವಂತೆ ಮನವಿ -Vishwanews24

ಗುಜ್ಜರ್ ಚಾರಿಟೇಬಲ್ ಟ್ರಸ್ಟ್ ಕಾರ್ಯಕ್ರಮದಲ್ಲಿ ಮಾತನಾಡಿದ ಆಜಾದ್, ನಾನು ನಮ್ಮ ದೇಶದ ಹಲವು ನಾಯಕರ ಬಗ್ಗೆ ಹೆಮ್ಮೆ ಪಡುತ್ತೇನೆ. ಅದರಲ್ಲೂ ನನ್ನಂತೆ ಗ್ರಾಮೀಣ ಪ್ರದೇಶಗಳಿಂದ ಬಂದು ರಾಜಕೀಯದಲ್ಲಿರುವವರು ಹಲವು ನಾಯಕರಿದ್ದಾರೆ. ನಮ್ಮ ದೇಶದ ಪ್ರಧಾನಿ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ ದೇಶದ ಜನರು ಪ್ರಧಾನಿಯನ್ನು ನೋಡಿ ಹಲವು ವಿಷಯಗಳನ್ನು ಕಲಿಯಬೇಕಿದೆ. ಅವರು ಪ್ರಧಾನಿಯಾಗಿದ್ದರೂ ತಮ್ಮ ಹಿಂದಿನದಿನಗಳಲ್ಲಿ ಚಹಾ ಮಾರಾಟ ಮಾಡುತ್ತಿದ್ದ ಬಗ್ಗೆ ಹೆಮ್ಮೆಯಿಂದ ನಾನು ಚಾಯ್ ವಾಲಾ ಎಂದುಕೊಂಡಿದ್ದಾರೆ. ಮೋದಿ ತನ್ನ ಹಿಂದಿನ ಕಾಯಕವನ್ನು ಮುಚ್ಚುಮರೆಯಿಲ್ಲದೆ ಹೇಳಿಕೊಂಡಿರುವುವು ಅವರ ಒಳ್ಳೆಯ ಗುಣ ಎಂದಿದ್ದಾರೆ.

ಮಂಗಳೂರು: ಮದುವೆಯ ಮರುದಿನ ಹೃದಯಾಘಾತದಿಂದ ಮೃತಪಟ್ಟ ಮದುಮಗಳು -Vishwanews24

ಕೊರೊನಾ ಮತ್ತು ಅರ್ಟಿಕಲ್ 370 ರಿಂದ ಜಮ್ಮು ಕಾಶ್ಮೀರ ಆರ್ಥಿಕವಾಗಿ ಕುಸಿದಿದೆ. ಇದರಿಂದ ಜಮ್ಮು ಕಾಶ್ಮೀರಕ್ಕೆ ಹೆಚ್ಚಿನ ಒತ್ತು ನೀಡಿ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಬೇಕಾಗಿದೆ. ಹಾಗೂ ಹೆಚ್ಚಿನ ಅನುದಾನವನ್ನು ನೀಡಿ ಕೈಗಾರಿಕೆಗಳನ್ನು ಬಲಪಡಿಸಬೇಕು ಎಂದು ಅಭಿಪ್ರಾಯಪಟ್ಟರು.

ಕೆಲದಿನಗಳ ಹಿಂದೆ ರಾಜ್ಯಸಭೆಯಿಂದ ನಿವೃತ್ತಿಯಾದ ಆಜಾದ್ ಅವರ ಕೆಲಸವನ್ನು ಶ್ಲಾಘಿಸಿ ಪ್ರಧಾನಿ ಮೋದಿ ಭಾವುಕರಾಗಿ ಕಣ್ಣೀರು ಹಾಕಿದ್ದರು.

ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಅಸಮಾಧಾನ ಹೊಂದಿರುವ 23 ಸದಸ್ಯರ ಗುಂಪಿನಲ್ಲಿರುವ ಆಜಾದ್ ಈಗಾಗಲೇ ಪಕ್ಷವನ್ನು ಆರಂಭದಿಂದ ಸಂಘಟಿಸಬೇಕು ಎಂದು ಹೇಳುತ್ತಿದ್ದಾರೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿ ಹೈಕಮಾಂಡ್ ನಾಯಕರೇ ಹುಬ್ಬೇರುವಂತೆ ಮಾಡಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago