ಪ್ರಧಾನಿ ಮೋದಿ ಮುಸ್ಲಿಂ ವಿರೋಧಿ ಮನೋಭಾವ ಹೊಂದಿಲ್ಲ , ಸಿಎಎ, ಎನ್‌ಆರ್‌ಸಿ ಬಗ್ಗೆ ಮುಸ್ಲಿಮರಲ್ಲಿ ತಪ್ಪು ಅಭಿಪ್ರಾಯ ಮೂಡಿಸಲಾಗುತ್ತಿದೆ : ಬಾಬಾ ರಾಮದೇವ್‌ -Vishwanews24

Featured, ರಾಜ್ಯ ನ್ಯೂಸ್

ಹುಬ್ಬಳ್ಳಿ:ರಾಷ್ಟ್ರೀಯ ಪೌರತ್ವ ನೋಂದಣಿಯಿಂದ ಭಾರತದ ಯಾವುದೇ ನಾಗರಿಕನ ಪೌರತ್ವ ರದ್ದಾದರೆ, ನಾನೂ ಹೋರಾಟ ಮಾಡುತ್ತೇನೆ’ ಎಂದು ಪತಂಜಲಿ ಯೋಗ ಪೀಠದ ಸಂಸ್ಥಾಪಕ ಬಾಬಾ ರಾಮದೇವ್‌ ಹೇಳಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿಎಎ, ಎನ್‌ಆರ್‌ಸಿ ಬಗ್ಗೆ ಮುಸ್ಲಿಮರಲ್ಲಿ ತಪ್ಪು ಅಭಿಪ್ರಾಯ ಮೂಡಿಸಲಾಗುತ್ತಿದೆ. ಯಾರದ್ದೂ ಪೌರತ್ವ ರದ್ದಾಗುವುದಿಲ್ಲ. ದೇಶದ ಮೇಲೆ ಹಿಂದೂಗಳಿರುವಷ್ಟೇ ಹಕ್ಕು ಮುಸ್ಲಿಮರಿಗೂ ಇದೆ’ ಎಂದರು.

‘ದೇಶದ ಆರ್ಥಿಕ ಪ್ರಗತಿಗೆ ಹಿಂದೂ–ಮುಸ್ಲಿಮರು ಒಗ್ಗಟ್ಟಾಗಿ ಹೋಗಬೇಕು. ಶೇ 99ರಷ್ಟು ಮುಸ್ಲಿಮರು ದೇಶಭಕ್ತರಾಗಿದ್ದಾರೆ. ಶೇ 1ರಷ್ಟು ಮಂದಿ ಕೆಟ್ಟ ಹೆಸರು ತರುವ ಕೆಲಸ ಮಾಡುತ್ತಿದ್ದಾರೆ. ಅವರನ್ನು ಬಹಿಷ್ಕರಿಸಲು ಮುಸ್ಲಿಮರು ಮುಂದಾಗಬೇಕು’ ಎಂದು ಹೇಳಿದರು.

‘ಪ್ರಧಾನಿ ನರೇಂದ್ರ ಮೋದಿ ಮುಸ್ಲಿಂ ವಿರೋಧಿ ಮನೋಭಾವ ಹೊಂದಿಲ್ಲ. ಹಿಂದೂಗಳಷ್ಟೇ ಮುಸ್ಲಿಮರದ್ದೂ ಹಕ್ಕಿದೆ. ಅವರೊಂದಿಗೆ ಜೊತೆಯಾಗಿ ಮುನ್ನಡೆಯಬೇಕು ಎಂದು ಅವರು ಹಲವಾರು ಬಾರಿ ಹೇಳಿದ್ದಾರೆ’ ಎಂದು ಅವರು ತಿಳಿಸಿದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292