ಮೈಸೂರು : ಕಳೆದ 10 ವರ್ಷಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡುವುದರ ಜೊತೆಗೆ ಕರ್ನಾಟಕಕ್ಕೆ ಅತಿ ಹೆಚ್ಚಿನ ಅನುದಾನ ನೀಡಿರುವ ಪ್ರಧಾನಿ ಮೋದಿ ಸರ್ಕಾರದ ಪರವಾಗಿ ರಾಜ್ಯದ ಜನರು ನಿಲ್ಲಬೇಕು ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಚ್.ಡಿ.ರೇವಣ್ಣ ಮನವಿ ಮಾಡಿದರು.
ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಭಾನುವಾರ ಆಯೋಜಿಸಿದ್ದ 4 ಸಾವಿರ ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭದಲ್ಲಿ ಮಾತನಾಡಿದ ಅವರು. ಹಾಸನ ಜಿಲ್ಲೆಯೊಂದಕ್ಕೆ 10500 ಕೋಟಿ ರೂ. ಅನುದಾನವನ್ನು ರಸ್ತೆ ಅಭಿವೃದ್ಧಿಗೆ ನೀಡಿದ್ದಾರೆ. ಹತ್ತು ವರ್ಷಗಳಲ್ಲಿ ಹಾಸನ ಜಿಲ್ಲೆಗೆ 35 ಸಾವಿರ ಕೋಟಿ ನೀಡಿದ್ದಾರೆ ಎಂದರು.
ಎಚ್.ಡಿ. ದೇವೇಗೌಡರು ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡುವುದಕ್ಕೆ ಹೋದರೆ ಯಾವುದೇ ಯೋಜನೆಗಳನ್ನು ಕೊಟ್ಟರೂ ಪರಿಶೀಲಿಸಿ ಒಪ್ಪಿಗೆ ನೀಡಿದ್ದಾರೆ. ದೇಶದಲ್ಲಿ ವಿರೋಧಿಗಳು ಇದ್ದರೂ ನಿತಿನ್ ಗಡ್ಕರಿ ಅವರ ಕೆಲಸವನ್ನು ಮೆಚ್ಚಿಕೊಂಡಿದ್ದಾರೆ. ಹೀಗಾಗಿ, ಮುಂದೆಯೂ ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಪರವಾಗಿ ರಾಜ್ಯದ ಜನ ನಿಲ್ಲಬೇಕು ಎಂದು ಅವರು ಕೋರಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…