ಬೆಂಗಳೂರು: ‘ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರ ವರ್ತನೆಯಿಂದಲೇ ರಾಜ್ಯದಲ್ಲಿ ಅಶಾಂತಿ ನೆಲೆಸಿದೆ. ಮೊದಲು ಪೌರತ್ವ ತಿದ್ದುಪಡಿ ಕಾಯ್ದೆ ಕಿತ್ತೆಸೆಯಿರಿ, ಎಲ್ಲವೂ ಸರಿ ಹೋಗುತ್ತದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೇಶದ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವ ಬದಲಿಗೆ ಹಿಂದೂಗಳ ನಿಜವಾದ ರಕ್ಷಕರೆಂಬ ಸುಳ್ಳು ಹೇಳುತ್ತಿದ್ದೀರಿ. ನಾವೂ ಹಿಂದೂಗಳೇ, ಹಿಂದೂಗಳ ವಿಚಾರದಲ್ಲಿ ನಿಮಗಿಂತ ನಮ್ಮ ಬದ್ಧತೆಯೇ ಹೆಚ್ಚಿದೆ’ ಎಂದು ಅವರು ಹೇಳಿದರು.
‘ಕೆಲವೊಂದು ವಿಷಯಗಳನ್ನು ಸರ್ಕಾರ ಬಹಳ ಸೂಕ್ಷ್ಮವಾಗಿ ನಿಭಾಯಿಸಬೇಕು. ಸಮಾಜದಲ್ಲಿ ಒಡಕು ಸೃಷ್ಟಿಸುವ ರೀತಿಯಲ್ಲಿ ವರ್ತಿಸಬಾರದು. ಮಂಗಳೂರಿನಲ್ಲಿ ಡಿಸೆಂಬರ್ 19ರ ಘಟನೆಯ ಎಷ್ಟು ಸತ್ಯಾಂಶ ಹೊರಗೆ ಇಟ್ಟಿದ್ದೀರಿ? ಬೆಂಗಳೂರಿನಲ್ಲಿ ಸಿಎಎ ಪರ ಹೋರಾಟ ನಡೆದಾಗ ಯಾವುದೇ ಗಲಭೆ ನಡೆದಿರಲಿಲ್ಲ, ಆದರೆ ಕೆಲವರನ್ನು ಬಂಧಿಸಿದ ಬಳಿಕ ಏಳು ಬಾರಿ ಕಲ್ಲು ಬಿತ್ತು ಎಂದು ಹೇಳುತ್ತಿದ್ದೀರಿ. ವರುಣ್ ಮೇಲೆ ಹಲ್ಲೆ ಯಾರೇ ನಡೆಸಿದ್ದರೂ ಅದನ್ನು ನಾನು ಖಂಡಿಸುತ್ತೇನೆ’ ಎಂದರು.
‘ಪಾಕ್ ಇಲ್ಲದಿದ್ದರೆ ಒಂದೂ ವೋಟೂ ಇಲ್ಲ’
‘ಪಾಕಿಸ್ತಾನ ಎಂಬ ದೇಶ ಈ ಭೂಪಟದಲ್ಲಿ ಇಲ್ಲದಿದ್ದರೆ ನೀವಿಲ್ಲಿ ಒಂದು ವೋಟೂ ಪಡೆಯಲು ಸಾಧ್ಯವಿರುತ್ತಿರಲಿಲ್ಲ. ಅದಕ್ಕಾಗಿಯೇ ಪಾಕ್ ನಾಮಸ್ಮರಣೆ ನಿಮ್ಮ ಕಾಯಕವಾಗಿಬಿಟ್ಟಿದೆ. ನನ್ನನ್ನು ದೇಶದ್ರೋಹಿ ಎನ್ನುತ್ತಿರುವ ನಿಮ್ಮ ಮೂಲ ಪಾಕ್ ಇರಬಹುದೇನೋ ನನಗೆ ಗೊತ್ತಿಲ್ಲ. ಪಾಕಿಸ್ತಾನದ ನೆಲ ಸ್ಪರ್ಶಿಸಿ, ಬಿರಿಯನಿ ತಿಂದು ಬಂದ ಪ್ರಧಾನಿಯ ಮಂತ್ರಿಮಂಡಲದಲ್ಲಿರುವ ನೀವು ದೇಶಭ್ರಷ್ಟರು, ನಾನು ಈ ಮಣ್ಣಿನವ’ ಎಂದು ಟ್ವೀಟ್ ಮಾಡಿದ್ದಾರೆ.
ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಉಡುಪಿ, ದ. ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್, ರೋಹಿಣಿ ಸಿಂಧೂರಿ ನೇಮಕ ಬೆಂಗಳೂರು:…
ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು : ಆಗಸ್ಟ್ 15ರ…
ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ ಮಂಗಳೂರು: ʼಸಾವಿನ ನಂತರವೂ ಬದುಕಬಹುದು, ಸಮಾಜಕ್ಕೆ ಉಪಕಾರವಾಗುವ ಮೂಲಕʼ…
ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ…
ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ಬಾಲಕಿ ಗಂಭೀರ ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು…
ವಂಚನೆ ಪ್ರಕರಣ : ಝೀನತ್ ಜಾಮೀನು ಅರ್ಜಿ ತಿರಸ್ಕೃತ ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪಡುಬಿದ್ರಿಯ ಝೀನತ್ ಇಬ್ರಾಹಿಂ ಜಾಮೀನಿಗಾಗಿ…