ನವದೆಹಲಿ: ‘ಇಂಡಿಯಾ’ ಕೂಟದ ಪ್ರಧಾನಿ ಅಭ್ಯರ್ಥಿ ಯಾರು, ಕೂಟ ಗೆದ್ದರೆ ಯಾರು ಪ್ರಧಾನಿಯಾಗುತ್ತಾರೆ ಎಂಬೆಲ್ಲಾ ಪ್ರಶ್ನೆಗಳಿಗೂ ಚತುರ ಉತ್ತರ ನೀಡುತ್ತಾ ಬಂದಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿಲುವು ಇದೀಗ ದಿಢೀರ್ ಬದಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಿ ಇಂಡಿಯಾ ಕೂಟ ಅಧಿಕಾರಕ್ಕೆ ಬಂದರೆ ಪ್ರಧಾನಿ ಸ್ಥಾನಕ್ಕೆ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಆಯ್ಕೆ ಎಂದು ಇದೇ ಮೊದಲ ಬಾರಿಗೆ ಅವರು ಬಹಿರಂಗವಾಗಿ ಸಾರಿದ್ದಾರೆ.
ಚುನಾವಣೆ ಪೂರ್ವದಲ್ಲಿ 2 ಭಾರತ್ ಜೋಡೋ ಯಾತ್ರೆ ಮಾಡಿರುವ ರಾಹುಲ್ ಗಾಂಧಿ, ಚುನಾವಣೆ ವೇಳೆ ವ್ಯಾಪಕವಾಗಿ ಪ್ರಚಾರ ಮಾಡಿದ್ದಾರೆ. ಮಿತ್ರ ಪಕ್ಷಗಳ ಜತೆ ವೇದಿಕೆ ಹಂಚಿಕೊಂಡು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೇರ ದಾಳಿಗಳನ್ನು ನಡೆಸಿದ್ದಾರೆ. ಹೀಗಾಗಿ ಉನ್ನತ ಹುದ್ದೆಗೆ ಅವರೇ ಜನಪ್ರಿಯ ಆಯ್ಕೆ ಎಂದು ಎನ್ಡಿಟೀವಿಗೆ ನೀಡಿರುವ ಸಂದರ್ಶನದಲ್ಲಿ ಅವರು ತಿಳಿಸಿದ್ದಾರೆ.
ಚುನಾವಣೆ ಮುಗಿದ ಬಳಿಕ ಇಂಡಿಯಾ ಕೂಟದ ಪಕ್ಷಗಳೆಲ್ಲವೂ ಸಭೆ ಸೇರಿ ಪ್ರಧಾನಿಯನ್ನು ಆಯ್ಕೆ ಮಾಡುತ್ತವೆ ಎಂದು ಮೊದಲಿನಿಂದಲೂ ಖರ್ಗೆ ಹೇಳಿಕೊಂಡು ಬಂದಿದ್ದರು. ಪ್ರಧಾನಿ ಹುದ್ದೆ ಕುರಿತ ಪ್ರಶ್ನೆಗಳಿಗೆಲ್ಲಾ ಖರ್ಗೆ ಅವರದ್ದು ಇದೇ ಉತ್ತರವಾಗಿತ್ತು. ಆದರೆ ಈಗ ಅವರು ರಾಹುಲ್ ಹೆಸರು ಹೇಳಿರುವುದು, ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ಸಿನ ಪರ ಹಕ್ಕು ಮಂಡಿಸುವ ಯತ್ನವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…