ನವದೆಹಲಿ: ‘ಇಂಡಿಯಾ’ ಕೂಟದ ಪ್ರಧಾನಿ ಅಭ್ಯರ್ಥಿ ಯಾರು, ಕೂಟ ಗೆದ್ದರೆ ಯಾರು ಪ್ರಧಾನಿಯಾಗುತ್ತಾರೆ ಎಂಬೆಲ್ಲಾ ಪ್ರಶ್ನೆಗಳಿಗೂ ಚತುರ ಉತ್ತರ ನೀಡುತ್ತಾ ಬಂದಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿಲುವು ಇದೀಗ ದಿಢೀರ್ ಬದಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಿ ಇಂಡಿಯಾ ಕೂಟ ಅಧಿಕಾರಕ್ಕೆ ಬಂದರೆ ಪ್ರಧಾನಿ ಸ್ಥಾನಕ್ಕೆ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಆಯ್ಕೆ ಎಂದು ಇದೇ ಮೊದಲ ಬಾರಿಗೆ ಅವರು ಬಹಿರಂಗವಾಗಿ ಸಾರಿದ್ದಾರೆ.
ಚುನಾವಣೆ ಪೂರ್ವದಲ್ಲಿ 2 ಭಾರತ್ ಜೋಡೋ ಯಾತ್ರೆ ಮಾಡಿರುವ ರಾಹುಲ್ ಗಾಂಧಿ, ಚುನಾವಣೆ ವೇಳೆ ವ್ಯಾಪಕವಾಗಿ ಪ್ರಚಾರ ಮಾಡಿದ್ದಾರೆ. ಮಿತ್ರ ಪಕ್ಷಗಳ ಜತೆ ವೇದಿಕೆ ಹಂಚಿಕೊಂಡು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೇರ ದಾಳಿಗಳನ್ನು ನಡೆಸಿದ್ದಾರೆ. ಹೀಗಾಗಿ ಉನ್ನತ ಹುದ್ದೆಗೆ ಅವರೇ ಜನಪ್ರಿಯ ಆಯ್ಕೆ ಎಂದು ಎನ್ಡಿಟೀವಿಗೆ ನೀಡಿರುವ ಸಂದರ್ಶನದಲ್ಲಿ ಅವರು ತಿಳಿಸಿದ್ದಾರೆ.
ಚುನಾವಣೆ ಮುಗಿದ ಬಳಿಕ ಇಂಡಿಯಾ ಕೂಟದ ಪಕ್ಷಗಳೆಲ್ಲವೂ ಸಭೆ ಸೇರಿ ಪ್ರಧಾನಿಯನ್ನು ಆಯ್ಕೆ ಮಾಡುತ್ತವೆ ಎಂದು ಮೊದಲಿನಿಂದಲೂ ಖರ್ಗೆ ಹೇಳಿಕೊಂಡು ಬಂದಿದ್ದರು. ಪ್ರಧಾನಿ ಹುದ್ದೆ ಕುರಿತ ಪ್ರಶ್ನೆಗಳಿಗೆಲ್ಲಾ ಖರ್ಗೆ ಅವರದ್ದು ಇದೇ ಉತ್ತರವಾಗಿತ್ತು. ಆದರೆ ಈಗ ಅವರು ರಾಹುಲ್ ಹೆಸರು ಹೇಳಿರುವುದು, ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ಸಿನ ಪರ ಹಕ್ಕು ಮಂಡಿಸುವ ಯತ್ನವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…