Featured

ಪ್ರಪಂಚದ ಅತ್ಯಂತ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಅಕ್ಷಯ್ ಕುಮಾರ್ ಗೆ 4ನೇ ಸ್ಥಾನ -Vishwanews24

ನ್ಯೂಯಾರ್ಕ್:ನವದೆಹಲಿ: ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಅವರು ಪ್ರಪಂಚದ ಅತೀ ಹೆಚ್ಚು ಸಂಭಾವನೆ ಪಡೆಯುವ ನಟರ ಪೈಕಿ ನಾಲ್ಕನೇ ಸ್ಥಾನ ಪಡೆದಿದ್ದಾರೆ.

ಪ್ರತಿಷ್ಠಿತ ಫೋರ್ಬ್ಸ್ ಮ್ಯಾಗಜೀನ್ 2019ರ ಅತ್ಯಂತ ಹೆಚ್ಚು ಸಂಭಾವನೆ ಪಡೆಯುವ ಜಗತ್ತಿನ ನಟರ ಪಟ್ಟಿ ಬಿಡುಗಡೆಗೊಳಿಸಿದೆ. ಈ ಪಟ್ಟಿಯಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ತಮ್ಮ 65 ಮಿಲಿಯನ್ ಅಮೆರಿಕನ್ ಡಾಲರ್ ಗಳಿಕೆಯೊಂದಿಗೆ (ಅಂದಾಜು ರೂ. 446 ಕೋಟಿ) ನಾಲ್ಕನೇ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಮೊದಲ ಸ್ಥಾನ ಹಾಲಿವುಡ್ ನಟ, ‘ದಿ ರಾಕ್’ ಎಂದೇ ಖ್ಯಾತರಾದ ಡ್ವಾಯ್ನೆ ಜಾನ್ಸನ್ ಅವರಿಗೆ ಹೋಗಿದ್ದು ಅವರ ಗಳಿಕೆ 89.4 ಮಿಲಿಯನ್ ಅಮೆರಿಕನ್ ಡಾಲರ್ ಆಗಿದೆ (ಅಂದಾಜು ರೂ. 640 ಕೋಟಿ).

‘ಮಿಷನ್ ಮಂಗಲ್’ ಯಶಸ್ಸಿನಿಂದ ಬೀಗುತ್ತಿರುವ ಅಕ್ಷಯ್ ಕುಮಾರ್, ಈ ಫೋರ್ಬ್ಸ್ ಪಟ್ಟಿಯಲ್ಲಿ ಮೊದಲ ಹತ್ತು ಮಂದಿಯಲ್ಲಿ ಸ್ಥಾನ ಪಡೆದ ಏಕೈಕ ಬಾಲಿವುಡ್ ನಟರಾಗಿದ್ದಾರೆ.

ಜಾಹಿರಾತು

ಫೋರ್ಬ್ಸ್ ಪಟ್ಟಿಯಲ್ಲಿ ಎರಡನೇ ಟಾಪರ್ ಆಸ್ಟ್ರೇಲಿಯಾದ ನಟ ಕ್ರಿಸ್ ಹೆಮ್ಸ್ ವರ್ತ್ (76.4 ಮಿಲಿಯನ್ ಅಮೆರಿಕನ್ ಡಾಲರ್ -ಅಂದಾಜು ರೂ. 547 ಕೋಟಿ) ಅವರಿಗೆ ಹೋಗಿದ್ದರೆ ಜಾಕಿ ಚಾನ್ ಅವರು ತಮ್ಮ 58 ಮಿಲಿಯನ್ ಯುಎಸ್ ಡಾಲರ್ ಗಳಿಕೆಯೊಂದಿಗೆ ಐದನೇ ಸ್ಥಾನ ಪಡೆದಿದ್ದಾರೆ. ಒಂಬತ್ತನೇ ಹಾಗೂ ಹತ್ತನೇ ಸ್ಥಾನ ಪೌಲ್ ರುಡ್ಡ್ ಹಾಗೂ ವಿಲ್ ಸ್ಮಿತ್ ಅವರಿಗೆ ಕ್ರಮವಾಗಿ ಹೋಗಿದೆ.

ಈ ವರ್ಷ ಈಗಾಗಲೇ ಅಕ್ಷಯ್ ಕುಮಾರ್ ಅಭಿನಯದ ಅನುರಾಗ್ ಸಿಂಗ್ ನಿರ್ದೇಶನದ ಕೇಸರಿ ಮತ್ತು ಜಗನ್ ಶಕ್ತಿ ನಿರ್ದೇಶನದ ಮಿಷನ್ ಮಂಗಲ್ ಬಿಡುಗಡೆಯಾಗಿ ಯಾಶಸ್ವಿ ಪ್ರದರ್ಶನ ಕಂಡಿವೆ. ಇದರ ಜೊತೆಗೆ ಬಾಲಿವುಡ್‍ನಲ್ಲಿ ತುಂಬ ಬೇಡಿಕೆಯ ನಟನಾಗಿರುವ ಅಕ್ಕಿ ಮುಂಬರುವ ಚಿತ್ರಗಳಲ್ಲಿ ಫರ್ಹಾದ್ ಸಂಜಿಯ ಹೌಸ್‍ಫುಲ್ 4, ರಾಜ್ ಮೆಹ್ತಾ ಅವರ ಗುಡ್ ನ್ಯೂಸ್, ರಾಘವ ಲಾರೆನ್ಸ್ ಅವರ ಲಕ್ಷ್ಮಿ ಬಾಂಬ್, ರೋಹಿತ್ ಶೆಟ್ಟಿಯ ಸೂರ್ಯವಂಶಿ ಮತ್ತು ಫರ್ಹಾದ್ ಸಂಜಿಯ ಬಚ್ಚನ್ ಪಾಂಡೆ ಚಿತ್ರಗಳಲ್ಲಿ ಅಭಿನಯ ಮಾಡಲಿದ್ದಾರೆ.

Vishwa News 24

Recent Posts

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

6 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

21 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

37 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

3 hours ago