Featured

ಪ್ರಪಂಚದ ಕೊನೆಯವರೆಗೂ ಸುರಕ್ಷಿತವಾಗಿರಿ ; ಪ್ರಧಾನಿ ಮೋದಿ ಬಳಿ ಭದ್ರತಾ ಲೋಪಕ್ಕೆ ವಿಷಾದ ವ್ಯಕ್ತಪಡಿಸಿದ ಪಂಜಾಬ್ ಸಿಎಂ  – Vishwanews24

ಪ್ರಪಂಚದ ಕೊನೆಯವರೆಗೂ ಸುರಕ್ಷಿತವಾಗಿರಿ ; ಪ್ರಧಾನಿ ಮೋದಿ ಬಳಿ ಭದ್ರತಾ ಲೋಪಕ್ಕೆ ವಿಷಾದ ವ್ಯಕ್ತಪಡಿಸಿದ ಪಂಜಾಬ್ ಸಿಎಂ  – Vishwanews24

ನವದೆಹಲಿ: ಪಂಜಾಬ್​ನಲ್ಲಿ ಪ್ರಧಾನಮಂತ್ರಿಗಳ ಭೇಟಿ ವೇಳೆ ನಡೆದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಪಂಜಾಬ್ ರಾಜ್ಯದ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಚನ್ನಿ ಅವರು ಪ್ರಧಾನಿ ಮೋದಿ ಬಳಿ ವಿಷಾದ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿಗಳೊಂದಿಗೆ ನಿನ್ನೆ ಸಂಜೆ ನಡೆಸಿದ ವರ್ಚುವಲ್ ಸಭೆಯಲ್ಲಿ, ಪಾಲ್ಗೊಂಡಿದ್ದ ಮುಖ್ಯಮಂತ್ರಿ ಚನ್ನಿ ಜನವರಿ 5 ರಂದು ತಮ್ಮ ರಾಜ್ಯದಲ್ಲಿ ನಡೆದ ಭದ್ರತಾ ಲೋಪದ ಬಗ್ಗೆ ವಿಷಾದಿಸಿದರು.

ಈ ಘಟನೆಗೆ ಸಂಬಂಧಿಸಿದಂತೆ ಶಾಯರಿ (ಕವಿತೆ)ಯೊಂದನ್ನು ಹೇಳಿದರು. ” ಗೌರವಾನ್ವಿತ ಪ್ರಧಾನಿ ಮೋದಿ ಜೀ. ನೀವು ಪಂಜಾಬ್‌ಗೆ ಬಂದಿದ್ದೀರಿ, ನಿಮ್ಮ ಭೇಟಿಯ ವೇಳೆ ನಡೆದ ಘಟನೆಗೆ ನಾವು ವಿಷಾದಿಸುತ್ತೇವೆ. ನಾನು ನಿಮಗಾಗಿ ಒಂದು ಶಾಯರಿ ಹೇಳಲು ಬಯಸುತ್ತೇನೆ. ‘ತುಮ್ ಸಲಾಮತ್ ರಹೋ ಖಯಾಮತ್ ತಕ್, ಔರ್ ಖುದಾ ಕರೇ ಕಿ ಖಯಾಮತ್ ನ ಹೋ’ (ಪ್ರಪಂಚದ ಕೊನೆಯವರೆಗೂ ಸುರಕ್ಷಿತವಾಗಿರಿ, ಜಗತ್ತು ಅಂತ್ಯಗೊಳ್ಳಲು ಬಿಡಬೇಡಿ)‘ ಎಂದು ಚರಂಜಿತ್ ಸಿಂಗ್ ಚನ್ನಿ ಹೇಳಿದರು.

ಪಂಜಾಬ್ ನಲ್ಲಿ ರೈತರ ಪ್ರತಿಭಟನೆಯ ಕಾರಣ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಸುಮಾರು 20 ನಿಮಿಷಗಳ ಕಾಲ ಫ್ಲೈಓವರ್ ಮೇಲೆ ಸಿಲುಕಿತ್ತು.

ಹುಸೇನಿವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಿ, ಸಮಾವೇಶ ಉದ್ದೇಶಿಸಿ ಮಾತನಾಡಲು ಫಿರೋಜ್‌ಪುರಕ್ಕೆ ತೆರಳುತ್ತಿದ್ದಾಗ ರೈತರು ಅವರು ತೆರಳುತ್ತಿದ್ದ ಮಾರ್ಗವನ್ನು ತಡೆದರು. ಇದರಿಂದ ಪ್ರಧಾನಿ ಬೆಂಗಾವಲು ವಾಪಸ್ಸು ತೆರಳಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸಮಾವೇಶ ರದ್ದುಪಡಿಸಲಾಗಿತ್ತು.

ಮೋದಿ ಭೇಟಿಯ ವೇಳೆ ಉಂಟಾದ ಭದ್ರತಾ ಲೋಪ ರಾಜಕೀಯ ವಿವಾದವಾಗಿ ಪರಿಣಮಿಸಿದೆ. ಇದೀಗ ಸುಪ್ರೀಂ ಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಗುರುವಾರ ನಡೆದ ಕೋವಿಡ್‌ ಕುರಿತ ಮುಖ್ಯಮಂತ್ರಿಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮುಖ್ಯಮಂತ್ರಿ ಚನ್ನಿ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago