Featured

ಪ್ರಮೋದ್‌ ಮಧ್ವರಾಜ್‌ಗೆ ಒಂದು ಅವಕಾಶ ಕೊಡಿ, ಕ್ಷೇತ್ರದ ಅಭಿವೃದ್ಧಿಯೊಂದಿಗೆ ಈ ಭಾಗದ ಸಮಸ್ಯೆಗಳನ್ನು ಪರಿಹರಿಸುತ್ತೇನೆ : ಎಚ್‌ಡಿಕೆ -Vishwanews24

ಕಾರ್ಕಳ:ಈ ಬಾರಿ ಪ್ರಮೋದ್‌ ಮಧ್ವರಾಜ್‌ಅವರಿಗೊಂದು ಅವಕಾಶ ಕೊಡಿ. ಕ್ಷೇತ್ರದ ಅಭಿವೃದ್ಧಿಯೊಂದಿಗೆ ಈ ಭಾಗದ ಸಮಸ್ಯೆಗಳನ್ನು ಪರಿಹರಿಸುತ್ತೇನೆ ಎಂದು ಮನವಿ ಮಾಡಿಕೊಂಡರು.

ನಾನು ಮುಖ್ಯ ಮಂತ್ರಿಯಾದ ಬಳಿಕ ಎಣ್ಣೆಹೊಳೆ ಕಿಂಡಿ ಅಣೆಕಟ್ಟು ಯೋಜನೆಗೆ ಬಜೆಟ್‌ನಲ್ಲಿ 40 ಕೋಟಿ ರೂ., ತಾಲೂಕಿನ 222 ಶಾಲಾ ಸಂಪರ್ಕ ಸೇತುವೆಗಳಿಗೆ 12 ಕೋಟಿ ರೂ., ಗ್ರಾಮೀಣಾಭಿವೃದ್ಧಿಗೆ 7 ಕೋಟಿ ರೂ. ಬಿಡುಗಡೆಗೊಳಿಸಿದ್ದು, ಕಾರ್ಕಳದ ಅಭಿವೃದ್ಧಿಗೆ 9 ತಿಂಗಳಲ್ಲಿ ಒಟ್ಟು 58 ಕೋಟಿ ರೂ. ಅನುದಾನ ಒದಗಿಸಿಕೊಟ್ಟಿದ್ದೇನೆ ಎಂದು ಮುಖ್ಯ ಮಂತ್ರಿ ಕುಮಾರಸ್ವಾಮಿ ಹೇಳಿದರು.

ಅವರು ರವಿವಾರ ಮಂಜುನಾಥ ಪೈ ಸ್ಮಾರಕ ಸಭಾಭವನದಲ್ಲಿ ಕಾಂಗ್ರೆಸ್‌ ಹಾಗೂ ಜನತಾದಳ ಜಂಟಿಯಾಗಿ ಏರ್ಪಡಿಸಿದ ಸಮಾವೇಶದಲ್ಲಿ ಮಾತನಾಡಿದರು.

2012-13ರಲ್ಲಿ ಬಿಜೆಪಿ ಸರಕಾರ ಕಾರ್ಕಳಕ್ಕೆ ನೀಡಿರುವುದು 5 ಕೋಟಿ, 2013-14ರಲ್ಲಿ 8 ಕೋಟಿ ರೂ. , ಅನಂತರ ಬಂದ ಸಿದ್ದರಾಮಯ್ಯ ಸರಕಾರ 48 ಕೋಟಿ ರೂ. ನೀಡಿದೆ ಎಂದರು.

ದೇಶ ರಕ್ಷಕರು ಸೈನಿಕರು. ಸೇನಾ ಪಡೆಗೆ ರಾಷ್ಟ್ರಪತಿ ಮುಖ್ಯಸ್ಥರೇ ಹೊರತು ಪ್ರಧಾನಿಯಲ್ಲ. ಸೈನಿಕರಸಾಧನೆಯನ್ನೂ ಮೋದಿ ತನ್ನದೆನ್ನುತ್ತಿ ದ್ದಾರೆ. ಇಂದಿರಾ ಗಾಂಧಿ, ಲಾಲ್‌ ಬಹದ್ದೂರ್‌ಶಾಸ್ತ್ರಿಯವರೂ ಸೈನಿಕರ ಸಾಹಸವನ್ನು ತಮ್ಮ ಸರಕಾರದ್ದೆಂದು ಹೇಳಿಕೊಂಡಿರಲಿಲ್ಲ. ದೇವೇಗೌಡರು ಪ್ರಧಾನಿಯಾಗಿದ್ದ ವೇಳೆ ಭಯೋ ತ್ಪಾದಕ ಚಟುವಟಿಕೆಗಳಾಗಲಿ, ಇನ್ನಿತರ ಯಾವುದೇ ಅಹಿತಕರ ಘಟನೆಗಳಾಗಲಿ ನಡೆ‌ದಿರಲಿಲ್ಲ. ಹಾಗೆಂದು ಅದು ನಮ್ಮ ಸಾಧನೆ ಎಂದು ಹೇಳಿಕೊಂಡು ಬಂದಿರಲಿಲ್ಲ ಎಂದರು.

ರಾಜ್ಯ ಸರಕಾರವನ್ನು ಅಸ್ಥಿರಗೊಳಿ ಸುವ ತಂತ್ರ ರೂಪಿಸುತ್ತಿದ್ದ ಬಿಜೆಪಿಯವರು ನೆಮ್ಮದಿಯಾಗಿ ಆಡಳಿತ ನಡೆಸಲು ಬಿಡಲಿಲ್ಲ. ಸರಕಾರಕ್ಕೆ ಪದೇಪದೇ ಗಡುವು ನೀಡುವ ಮೂಲಕ ಅಧಿಕಾರಿಗಳು ಪರಿಣಾಮಕಾರಿ ಯಾಗಿ ಕೆಲಸ ನಿರ್ವಹಿಸದಂತೆ ತಡೆಯು ತ್ತಿದ್ದರು. ಇವೆಲ್ಲವುಗಳ ನಡುವೆ ನಾವು ಜನಪರ ಆಡಳಿತ ನೀಡಿದ್ದೇವೆ. ಅನೇಕ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿದ್ದೇವೆ. ನಮ್ಮ ಕೆಲಸ ಕಾರ್ಯಗಳಿಗೆ ನಿರೀಕ್ಷಿತ ಪ್ರಚಾರ ಮಾತ್ರ ಸಿಗುತ್ತಿಲ್ಲ ಎಂದರು.

ಸಚಿವರಾದ ಡಾ| ಜಯಮಾಲಾ, ಯು.ಟಿ. ಖಾದರ್‌, ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌, ನಾಯಕರಾದ ಅಮರನಾಥ ಶೆಟ್ಟಿ, ಭೋಜೇಗೌಡ, ಬಿ.ಎಂ. ಫಾರೂಕ್‌, ಗೋಪಾಲ ಭಂಡಾರಿ, ಯು.ಆರ್‌. ಸಭಾಪತಿ, ಅಶೋಕ ಕುಮಾರ್‌ ಕೊಡವೂರು, ಉದಯ ಶೆಟ್ಟಿ ಮುನಿಯಾಲು, ಅಧ್ಯಕ್ಷ ಶೇಖರ್‌ ಮಡಿವಾಳ, ಯೋಗಿಶ್‌ ಶೆಟ್ಟಿ ವೇದಿಕೆ ಯಲ್ಲಿದ್ದರು. ಬಿಪಿನ್‌ ಚಂದ್ರಪಾಲ್‌ ಸಭೆ ನಿರ್ವಹಿಸಿದರು.

 

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

9 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

10 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

10 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

10 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

10 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

10 hours ago