Featured

ಪ್ರಮೋದ್‌ ಮಧ್ವರಾಜ್‌ಗೆ ಒಂದು ಅವಕಾಶ ಕೊಡಿ, ಕ್ಷೇತ್ರದ ಅಭಿವೃದ್ಧಿಯೊಂದಿಗೆ ಈ ಭಾಗದ ಸಮಸ್ಯೆಗಳನ್ನು ಪರಿಹರಿಸುತ್ತೇನೆ : ಎಚ್‌ಡಿಕೆ -Vishwanews24

ಕಾರ್ಕಳ:ಈ ಬಾರಿ ಪ್ರಮೋದ್‌ ಮಧ್ವರಾಜ್‌ಅವರಿಗೊಂದು ಅವಕಾಶ ಕೊಡಿ. ಕ್ಷೇತ್ರದ ಅಭಿವೃದ್ಧಿಯೊಂದಿಗೆ ಈ ಭಾಗದ ಸಮಸ್ಯೆಗಳನ್ನು ಪರಿಹರಿಸುತ್ತೇನೆ ಎಂದು ಮನವಿ ಮಾಡಿಕೊಂಡರು.

ನಾನು ಮುಖ್ಯ ಮಂತ್ರಿಯಾದ ಬಳಿಕ ಎಣ್ಣೆಹೊಳೆ ಕಿಂಡಿ ಅಣೆಕಟ್ಟು ಯೋಜನೆಗೆ ಬಜೆಟ್‌ನಲ್ಲಿ 40 ಕೋಟಿ ರೂ., ತಾಲೂಕಿನ 222 ಶಾಲಾ ಸಂಪರ್ಕ ಸೇತುವೆಗಳಿಗೆ 12 ಕೋಟಿ ರೂ., ಗ್ರಾಮೀಣಾಭಿವೃದ್ಧಿಗೆ 7 ಕೋಟಿ ರೂ. ಬಿಡುಗಡೆಗೊಳಿಸಿದ್ದು, ಕಾರ್ಕಳದ ಅಭಿವೃದ್ಧಿಗೆ 9 ತಿಂಗಳಲ್ಲಿ ಒಟ್ಟು 58 ಕೋಟಿ ರೂ. ಅನುದಾನ ಒದಗಿಸಿಕೊಟ್ಟಿದ್ದೇನೆ ಎಂದು ಮುಖ್ಯ ಮಂತ್ರಿ ಕುಮಾರಸ್ವಾಮಿ ಹೇಳಿದರು.

ಅವರು ರವಿವಾರ ಮಂಜುನಾಥ ಪೈ ಸ್ಮಾರಕ ಸಭಾಭವನದಲ್ಲಿ ಕಾಂಗ್ರೆಸ್‌ ಹಾಗೂ ಜನತಾದಳ ಜಂಟಿಯಾಗಿ ಏರ್ಪಡಿಸಿದ ಸಮಾವೇಶದಲ್ಲಿ ಮಾತನಾಡಿದರು.

2012-13ರಲ್ಲಿ ಬಿಜೆಪಿ ಸರಕಾರ ಕಾರ್ಕಳಕ್ಕೆ ನೀಡಿರುವುದು 5 ಕೋಟಿ, 2013-14ರಲ್ಲಿ 8 ಕೋಟಿ ರೂ. , ಅನಂತರ ಬಂದ ಸಿದ್ದರಾಮಯ್ಯ ಸರಕಾರ 48 ಕೋಟಿ ರೂ. ನೀಡಿದೆ ಎಂದರು.

ದೇಶ ರಕ್ಷಕರು ಸೈನಿಕರು. ಸೇನಾ ಪಡೆಗೆ ರಾಷ್ಟ್ರಪತಿ ಮುಖ್ಯಸ್ಥರೇ ಹೊರತು ಪ್ರಧಾನಿಯಲ್ಲ. ಸೈನಿಕರಸಾಧನೆಯನ್ನೂ ಮೋದಿ ತನ್ನದೆನ್ನುತ್ತಿ ದ್ದಾರೆ. ಇಂದಿರಾ ಗಾಂಧಿ, ಲಾಲ್‌ ಬಹದ್ದೂರ್‌ಶಾಸ್ತ್ರಿಯವರೂ ಸೈನಿಕರ ಸಾಹಸವನ್ನು ತಮ್ಮ ಸರಕಾರದ್ದೆಂದು ಹೇಳಿಕೊಂಡಿರಲಿಲ್ಲ. ದೇವೇಗೌಡರು ಪ್ರಧಾನಿಯಾಗಿದ್ದ ವೇಳೆ ಭಯೋ ತ್ಪಾದಕ ಚಟುವಟಿಕೆಗಳಾಗಲಿ, ಇನ್ನಿತರ ಯಾವುದೇ ಅಹಿತಕರ ಘಟನೆಗಳಾಗಲಿ ನಡೆ‌ದಿರಲಿಲ್ಲ. ಹಾಗೆಂದು ಅದು ನಮ್ಮ ಸಾಧನೆ ಎಂದು ಹೇಳಿಕೊಂಡು ಬಂದಿರಲಿಲ್ಲ ಎಂದರು.

ರಾಜ್ಯ ಸರಕಾರವನ್ನು ಅಸ್ಥಿರಗೊಳಿ ಸುವ ತಂತ್ರ ರೂಪಿಸುತ್ತಿದ್ದ ಬಿಜೆಪಿಯವರು ನೆಮ್ಮದಿಯಾಗಿ ಆಡಳಿತ ನಡೆಸಲು ಬಿಡಲಿಲ್ಲ. ಸರಕಾರಕ್ಕೆ ಪದೇಪದೇ ಗಡುವು ನೀಡುವ ಮೂಲಕ ಅಧಿಕಾರಿಗಳು ಪರಿಣಾಮಕಾರಿ ಯಾಗಿ ಕೆಲಸ ನಿರ್ವಹಿಸದಂತೆ ತಡೆಯು ತ್ತಿದ್ದರು. ಇವೆಲ್ಲವುಗಳ ನಡುವೆ ನಾವು ಜನಪರ ಆಡಳಿತ ನೀಡಿದ್ದೇವೆ. ಅನೇಕ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿದ್ದೇವೆ. ನಮ್ಮ ಕೆಲಸ ಕಾರ್ಯಗಳಿಗೆ ನಿರೀಕ್ಷಿತ ಪ್ರಚಾರ ಮಾತ್ರ ಸಿಗುತ್ತಿಲ್ಲ ಎಂದರು.

ಸಚಿವರಾದ ಡಾ| ಜಯಮಾಲಾ, ಯು.ಟಿ. ಖಾದರ್‌, ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌, ನಾಯಕರಾದ ಅಮರನಾಥ ಶೆಟ್ಟಿ, ಭೋಜೇಗೌಡ, ಬಿ.ಎಂ. ಫಾರೂಕ್‌, ಗೋಪಾಲ ಭಂಡಾರಿ, ಯು.ಆರ್‌. ಸಭಾಪತಿ, ಅಶೋಕ ಕುಮಾರ್‌ ಕೊಡವೂರು, ಉದಯ ಶೆಟ್ಟಿ ಮುನಿಯಾಲು, ಅಧ್ಯಕ್ಷ ಶೇಖರ್‌ ಮಡಿವಾಳ, ಯೋಗಿಶ್‌ ಶೆಟ್ಟಿ ವೇದಿಕೆ ಯಲ್ಲಿದ್ದರು. ಬಿಪಿನ್‌ ಚಂದ್ರಪಾಲ್‌ ಸಭೆ ನಿರ್ವಹಿಸಿದರು.

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago