ಉಡುಪಿ, ; ಕಾಂಗ್ರೆಸ್ ಪಾಳಯದಲ್ಲಿ ಭಾರೀ ಗೊಂದಲ ಸೃಷ್ಟಿಯಾಗಿದೆ. ಉಡುಪಿ ಶಾಸಕ ಪ್ರಮೋದ್ ಮದ್ವರಾಜ್ ಅವರ ಮೇಲೆ ಕಾಂಗ್ರೆಸ್ ನಾಯಕರು ನಂಬಿಕೆ ಕಳೆದುಕೊಂಡಿದ್ದಾರಾ ? ಎಂಬ ಸಂಶಯ ವ್ಯಕ್ತವಾಗ ತೊಡಗಿದೆ. ಪ್ರಮೋದ್ ಮದ್ವರಾಜ್ ಈ ಬಾರಿ ಕಾಂಗ್ರೆಸ್ ನಿಂದ ಸ್ಪರ್ಧಿಸುತ್ತಾರೆ ಅನ್ನುವುದರ ಬಗ್ಗೆ ಕೈ ಪಾಳಯದ ಹಿರಿಯ ನಾಯಕರಿಗೆ ಅನುಮಾನ ಕಾಡಲಾರಂಭಿಸಿದೆ. ಶಾಸಕ ಪ್ರಮೋದ್ ಮದ್ವರಾಜ್ ಬಿಜೆಪಿ ಗೆ ಸೇರಲಿದ್ದಾರೆ ಎಂಬ ಗುಸುಗುಸು ಈ ಹಿಂದೆ ಆರಂಭವಾಗಿ ಭಾರೀ ವಿವಾದವೇ ಸೃಷ್ಟಿಯಾಗಿತ್ತು.
ಆದರೆ ಈ ಎಲ್ಲಾ ಅನುಮಾನಗಳಿಗೆ ಸ್ಪಷ್ಟನೆ ನೀಡಿ ವಿವಾದಕ್ಕೆ ತೆರೆಯೆಳೆದಿದ್ದರು. ಬಿಜೆಪಿ ಸೇರುವ ಬಗ್ಗೆ ಪ್ರಮೋದ್ ಮಧ್ವರಾಜ್ ಹೇಳಿದ್ದೇನು? ಆದರೆ ಈ ನಡುವೆ ಕಾಂಗ್ರೇಸ್ ನಾಯಕರು ಉಡುಪಿ ವಿಧಾನ ಸಭಕ್ಷೇತದಿಂದ ಸ್ಫರ್ಧಿಸಲು ಅಭ್ಯರ್ಥಿಯನ್ನು ತೆರೆಯ ಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಟಿಕೆಟ್ ಯಾರಿಗೆ ಅನ್ನುವುದು ಘೋಷಣೆಯಾಗುತ್ತಿದಂತೆ ಪ್ರಮೋದ್ ಮದ್ವರಾಜ್ ಕೈಪಾಳಯಕ್ಕೆ ಕೈ ಕೊಟ್ಟು ಬಿಜೆಪಿ ಕಡೆ ಮುಖಮಾಡಿದರೆ ಪ್ರಮೋದ್ ಮದ್ವರಾಜ್ ಗೆ ಪ್ರಬಲ ಸ್ಪರ್ಧಿಯನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ. ತೆರೆಮರೆಗೆ ಸರಿದಿದ್ದಮಾಜಿ ಶಾಸಕ ಯು ಆರ್ ಸಭಾಪತಿ ರಾಜಕೀಯ ರಂಗಕ್ಕೆ ಮರುಪ್ರವೇಶ ಮಾಡಲು ಸಿದ್ದತೆಯಲ್ಲಿ ತೋಡಗಿದ್ದಾರೆ ಎಂದು ಹೇಳಲಾಗಿದೆ.
ಕಾಂಗ್ರೇಸ್ ನ ಹಿರಿಯ ನಾಯಕರೊಬ್ಬರ ಯೋಜನೆ ಯಂತೆ ಯು ಆರ್ ಸಭಾಪತಿಯವರಿಗೆ ಕಾಂಗ್ರೇಸ್ ಟಿಕೆಟ್ ನೀಡುವುದಕ್ಕೆ ತರೆಯ ಮರೆಯಲ್ಲಿ ತಯಾರಿ ನಡೆಸುತ್ತಿದೆ ಎಂಬ ಸಂಶಯ ವ್ಯಕ್ತವಾಗಿದೆ. ಯು ಆರ್ ಸಭಾಪತಿ ಉಡುಪಿಯ ಹಲವು ಉದ್ಯಮಿಗಳನ್ನುಭೇಟಿ ಮಾಡಿ ಬೆಂಬಲ ಯಾಚಿಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಚುನಾವಣೆ ಹತ್ತಿವಾಗುತ್ತಿದ್ದಂತೆ ಶಾಸಕ ಪ್ರಮೋದ್ ಮದ್ವರಾಜ್ ನಡೆಸಲಿರುವ ರಾಜಕೀಯ ದಾಳ ನೋಡಿಕೊಂಡು ಕಾಂಗ್ರೇಸ್ ಹಿರಿಯ ನಾಯಕರು ತಮ್ಮ ರಾಜಕೀಯ ತಂತ್ರಗಾರಿಕೆ ಜಾರಿಗೆ ತರಲು ಕಾಯುತ್ತಿದ್ದಾರೆ ಅನ್ನುವ ಮಾತು ಕೇಳಿಬರುತ್ತಿದೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…