ಉಡುಪಿ, ; ಕಾಂಗ್ರೆಸ್ ಪಾಳಯದಲ್ಲಿ ಭಾರೀ ಗೊಂದಲ ಸೃಷ್ಟಿಯಾಗಿದೆ. ಉಡುಪಿ ಶಾಸಕ ಪ್ರಮೋದ್ ಮದ್ವರಾಜ್ ಅವರ ಮೇಲೆ ಕಾಂಗ್ರೆಸ್ ನಾಯಕರು ನಂಬಿಕೆ ಕಳೆದುಕೊಂಡಿದ್ದಾರಾ ? ಎಂಬ ಸಂಶಯ ವ್ಯಕ್ತವಾಗ ತೊಡಗಿದೆ. ಪ್ರಮೋದ್ ಮದ್ವರಾಜ್ ಈ ಬಾರಿ ಕಾಂಗ್ರೆಸ್ ನಿಂದ ಸ್ಪರ್ಧಿಸುತ್ತಾರೆ ಅನ್ನುವುದರ ಬಗ್ಗೆ ಕೈ ಪಾಳಯದ ಹಿರಿಯ ನಾಯಕರಿಗೆ ಅನುಮಾನ ಕಾಡಲಾರಂಭಿಸಿದೆ. ಶಾಸಕ ಪ್ರಮೋದ್ ಮದ್ವರಾಜ್ ಬಿಜೆಪಿ ಗೆ ಸೇರಲಿದ್ದಾರೆ ಎಂಬ ಗುಸುಗುಸು ಈ ಹಿಂದೆ ಆರಂಭವಾಗಿ ಭಾರೀ ವಿವಾದವೇ ಸೃಷ್ಟಿಯಾಗಿತ್ತು.
ಆದರೆ ಈ ಎಲ್ಲಾ ಅನುಮಾನಗಳಿಗೆ ಸ್ಪಷ್ಟನೆ ನೀಡಿ ವಿವಾದಕ್ಕೆ ತೆರೆಯೆಳೆದಿದ್ದರು. ಬಿಜೆಪಿ ಸೇರುವ ಬಗ್ಗೆ ಪ್ರಮೋದ್ ಮಧ್ವರಾಜ್ ಹೇಳಿದ್ದೇನು? ಆದರೆ ಈ ನಡುವೆ ಕಾಂಗ್ರೇಸ್ ನಾಯಕರು ಉಡುಪಿ ವಿಧಾನ ಸಭಕ್ಷೇತದಿಂದ ಸ್ಫರ್ಧಿಸಲು ಅಭ್ಯರ್ಥಿಯನ್ನು ತೆರೆಯ ಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಟಿಕೆಟ್ ಯಾರಿಗೆ ಅನ್ನುವುದು ಘೋಷಣೆಯಾಗುತ್ತಿದಂತೆ ಪ್ರಮೋದ್ ಮದ್ವರಾಜ್ ಕೈಪಾಳಯಕ್ಕೆ ಕೈ ಕೊಟ್ಟು ಬಿಜೆಪಿ ಕಡೆ ಮುಖಮಾಡಿದರೆ ಪ್ರಮೋದ್ ಮದ್ವರಾಜ್ ಗೆ ಪ್ರಬಲ ಸ್ಪರ್ಧಿಯನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ. ತೆರೆಮರೆಗೆ ಸರಿದಿದ್ದಮಾಜಿ ಶಾಸಕ ಯು ಆರ್ ಸಭಾಪತಿ ರಾಜಕೀಯ ರಂಗಕ್ಕೆ ಮರುಪ್ರವೇಶ ಮಾಡಲು ಸಿದ್ದತೆಯಲ್ಲಿ ತೋಡಗಿದ್ದಾರೆ ಎಂದು ಹೇಳಲಾಗಿದೆ.
ಕಾಂಗ್ರೇಸ್ ನ ಹಿರಿಯ ನಾಯಕರೊಬ್ಬರ ಯೋಜನೆ ಯಂತೆ ಯು ಆರ್ ಸಭಾಪತಿಯವರಿಗೆ ಕಾಂಗ್ರೇಸ್ ಟಿಕೆಟ್ ನೀಡುವುದಕ್ಕೆ ತರೆಯ ಮರೆಯಲ್ಲಿ ತಯಾರಿ ನಡೆಸುತ್ತಿದೆ ಎಂಬ ಸಂಶಯ ವ್ಯಕ್ತವಾಗಿದೆ. ಯು ಆರ್ ಸಭಾಪತಿ ಉಡುಪಿಯ ಹಲವು ಉದ್ಯಮಿಗಳನ್ನುಭೇಟಿ ಮಾಡಿ ಬೆಂಬಲ ಯಾಚಿಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಚುನಾವಣೆ ಹತ್ತಿವಾಗುತ್ತಿದ್ದಂತೆ ಶಾಸಕ ಪ್ರಮೋದ್ ಮದ್ವರಾಜ್ ನಡೆಸಲಿರುವ ರಾಜಕೀಯ ದಾಳ ನೋಡಿಕೊಂಡು ಕಾಂಗ್ರೇಸ್ ಹಿರಿಯ ನಾಯಕರು ತಮ್ಮ ರಾಜಕೀಯ ತಂತ್ರಗಾರಿಕೆ ಜಾರಿಗೆ ತರಲು ಕಾಯುತ್ತಿದ್ದಾರೆ ಅನ್ನುವ ಮಾತು ಕೇಳಿಬರುತ್ತಿದೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…