ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದನ್ನು ಸಮರ್ಥಿಸಿಕೊಂಡು ಮಾತನಾಡಿದ್ದ ಹಿನ್ನೆಲೆಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಪೊಲೀಸ್ ಸಬ್ ಇನ್ಸ್ಪೆಕ್ಟರ್ದೂರಿನ ಮೇರೆಗೆ ದಾಖಲಾಗಿದ್ದ ಎಫ್ಐಆರ್ಮತ್ತು ಅದಕ್ಕೆ ಸಂಬಂಧಿಸಿದ ವಿಚಾರಣ ನ್ಯಾಯಾಲಯದ ವಿಚಾರಣೆಯನ್ನುರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಎಫ್ಐಆರ್ಹಾಗೂ ವಿಚಾರಣ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಪ್ರಮೋದ್ ಮದ್ವರಾಜ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.
ನ್ಯಾಯಾಲಯವು ಅರ್ಜಿದಾರರು ನೀಡಿರುವ ಹೇಳಿಕೆಯಲ್ಲಿ ಪೊಲೀಸರು ಗಲಭೆ ಸೃಷ್ಟಿಸಲು ಪ್ರಚೋದನೆ ನೀಡಿದ ಹಾಗೂ ಅಕ್ರಮ ಕೂಟ ಅಪರಾಧದ ಅಂಶಗಳಿಲ್ಲ ಎಂದು ಎಫ್ಐಆರ್ರದ್ದುಪಡಿಸಿದೆ.
ಪ್ರಕರಣವೇನು?
2025ರ ಮಾ. 18ರಂದು ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿದ್ದ ಮಹಿಳೆಯನ್ನು ಕೆಲವರು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದರು. ಈ ಸಂಬಂಧ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರು ಐವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಈ ಪ್ರಕರಣವನ್ನು ಶಾಂತಿಯುತವಾಗಿ ಬಗೆಹರಿಸಲು ಮಲ್ಪೆ ಮೀನುಗಾರರ ಸಂಘ ಸೇರಿದಂತೆ ಇನ್ನಿತರ ಪ್ರಮುಖ ಮೀನುಗಾರಿಕಾ ಸಂಘಗಳು ಮಾ. 22ರಂದು ಮಲ್ಪೆಯ ಬಂದರಿನಲ್ಲಿ ಸಭೆ ಆಯೋಜಿಸಿದ್ದವು. ಈ ಸಭೆಯಲ್ಲಿ ಅವರು ಮಾಡಿದ ಭಾಷಣದ ಮೇಲೆ ಕೇಸು ದಾಖಲಾಗಿತ್ತು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…