ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದನ್ನು ಸಮರ್ಥಿಸಿಕೊಂಡು ಮಾತನಾಡಿದ್ದ ಹಿನ್ನೆಲೆಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಪೊಲೀಸ್ ಸಬ್ ಇನ್ಸ್ಪೆಕ್ಟರ್ದೂರಿನ ಮೇರೆಗೆ ದಾಖಲಾಗಿದ್ದ ಎಫ್ಐಆರ್ಮತ್ತು ಅದಕ್ಕೆ ಸಂಬಂಧಿಸಿದ ವಿಚಾರಣ ನ್ಯಾಯಾಲಯದ ವಿಚಾರಣೆಯನ್ನುರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಎಫ್ಐಆರ್ಹಾಗೂ ವಿಚಾರಣ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಪ್ರಮೋದ್ ಮದ್ವರಾಜ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.
ನ್ಯಾಯಾಲಯವು ಅರ್ಜಿದಾರರು ನೀಡಿರುವ ಹೇಳಿಕೆಯಲ್ಲಿ ಪೊಲೀಸರು ಗಲಭೆ ಸೃಷ್ಟಿಸಲು ಪ್ರಚೋದನೆ ನೀಡಿದ ಹಾಗೂ ಅಕ್ರಮ ಕೂಟ ಅಪರಾಧದ ಅಂಶಗಳಿಲ್ಲ ಎಂದು ಎಫ್ಐಆರ್ರದ್ದುಪಡಿಸಿದೆ.
ಪ್ರಕರಣವೇನು?
2025ರ ಮಾ. 18ರಂದು ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿದ್ದ ಮಹಿಳೆಯನ್ನು ಕೆಲವರು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದರು. ಈ ಸಂಬಂಧ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರು ಐವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಈ ಪ್ರಕರಣವನ್ನು ಶಾಂತಿಯುತವಾಗಿ ಬಗೆಹರಿಸಲು ಮಲ್ಪೆ ಮೀನುಗಾರರ ಸಂಘ ಸೇರಿದಂತೆ ಇನ್ನಿತರ ಪ್ರಮುಖ ಮೀನುಗಾರಿಕಾ ಸಂಘಗಳು ಮಾ. 22ರಂದು ಮಲ್ಪೆಯ ಬಂದರಿನಲ್ಲಿ ಸಭೆ ಆಯೋಜಿಸಿದ್ದವು. ಈ ಸಭೆಯಲ್ಲಿ ಅವರು ಮಾಡಿದ ಭಾಷಣದ ಮೇಲೆ ಕೇಸು ದಾಖಲಾಗಿತ್ತು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…