Featured

ಪ್ರಯಾಣದ ವೇಳೆ ಹೆರಿಗೆ ನೋವು  ;  ಬಸ್ಸನ್ನು ನೇರವಾಗಿ ಆಸ್ಪತ್ರೆ ಬಳಿ ತಂದು ನಿಲ್ಲಿಸಿದ ಚಾಲಕ – ಬಸ್​ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ – vishwanews24

ಪ್ರಯಾಣದ ವೇಳೆ ಹೆರಿಗೆ ನೋವು  ;  ಬಸ್ಸನ್ನು ನೇರವಾಗಿ ಆಸ್ಪತ್ರೆ ಬಳಿ ತಂದು ನಿಲ್ಲಿಸಿದ ಚಾಲಕ – ಬಸ್​ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಬಸ್​ನಲ್ಲಿ ಚಲಿಸುತ್ತಿದ್ದ ಮಹಿಳೆಗೆ ಏಕಾಏಕಿ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಕೊನೆಗೆ ಡ್ರೈವರ್​ ಬಸ್ಸನ್ನು ನೇರವಾಗಿ ಆಸ್ಪತ್ರೆ ಬಳಿ ತಂದು ನಿಲ್ಲಿಸಿದ ಘಟನೆ ದೃಶ್ಯ ಸಮೇತ ವೈರಲ್​ ಆಗಿದೆ. ಕೇರಳದ ತ್ರಿಶೂರ್​​ನಿಂದ ಕೋಝಿಕ್ಕೋಡ್​ಗೆ ತೆರಳುತ್ತಿದ್ದ ಬಸ್​ನಲ್ಲಿ ಈ ಘಟನೆ ನಡೆದಿದೆ. ಡ್ರೈವರ್​ ಮಹಾತ್ಕಾರ್ಯದಿಂದ ಮಹಿಳೆ ಬಸ್​ನಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ.

ಬಸ್​ ಪೆರಮಂಗಲಂ ಪ್ರದೇಶವನ್ನು ದಾಟಿದಂತೆ 37 ವರ್ಷದ ಗರ್ಭಿಣಿ ಮಹಿಳೆಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ವಿಚಾರ ತಿಳಿದಂತೆ ಬಸ್​ ಚಾಲಕ ಬಸ್​ ಅನ್ನು ತ್ರಿಶೂರು ಕಡೆಗೆ ತಿರುಗಿಸಿದ್ದಾರೆ. ಅಲ್ಲಿನ ಅಮಲಾ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಅದಕ್ಕೂ ಮುನ್ನ ಆಸ್ಪತ್ರೆಯ ಸಿಬ್ಬಂದಿಗೆ ವಿಚಾರ ತಿಳಿಸಲಾಗಿದೆ. ಬಸ್​ ಆಸ್ಪತ್ರೆಯನ್ನು ತಲುಪುವ ಮೊದಲೇ ಸಿಬ್ಬಂದಿಗಳು ಮತ್ತು ವೈದ್ಯರು ಎಲ್ಲ ವ್ಯವಸ್ಥೆಯನ್ನು ಮಾಡಿಕೊಂಡಿದ್ದರು.

ಬಸ್​ ಆಸ್ಪತ್ರೆ ಬಳಿ ಬಂದಂತೆ ಮಹಿಳೆ ವೈದ್ಯರ ಸಹಾಯದಲ್ಲಿ ಬಸ್​ನಲ್ಲೇ ಹೆರಿಗೆಯಾಗಿದ್ದಾಳೆ. ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಇನ್ನು ಮಹಿಳೆಯ ಹೆರಿಗೆ ಯಶಸ್ವಿಯಾಗಿದೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ತಾಯಿ ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ಬಸ್​ ಚಾಲಕ ಬಸ್​ ಅನ್ನು ಆಸ್ಪತ್ರೆಗೆ ಬಳಿ ಚಲಾಯಿಸಿಕೊಂಡು ಬರುವ, ಮಹಿಳೆ ಹೆಣ್ಣು ಮಗುವಿನ ಜನ್ಮ ನೀಡಿದ ದೃಶ್ಯ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಇನ್ನು ದೃಶ್ಯವನ್ನು ಕಂಡು ಚಾಲಕ, ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳಿಗೆ ನೆಟ್ಟಿಗರು ಧನ್ಯವಾದ ಹೇಳಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

18 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

18 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

18 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

21 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

21 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

21 hours ago