Featured

ಪ್ರಯಾಣದ ವೇಳೆ ಹೆರಿಗೆ ನೋವು  ;  ಬಸ್ಸನ್ನು ನೇರವಾಗಿ ಆಸ್ಪತ್ರೆ ಬಳಿ ತಂದು ನಿಲ್ಲಿಸಿದ ಚಾಲಕ – ಬಸ್​ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ – vishwanews24

ಪ್ರಯಾಣದ ವೇಳೆ ಹೆರಿಗೆ ನೋವು  ;  ಬಸ್ಸನ್ನು ನೇರವಾಗಿ ಆಸ್ಪತ್ರೆ ಬಳಿ ತಂದು ನಿಲ್ಲಿಸಿದ ಚಾಲಕ – ಬಸ್​ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಬಸ್​ನಲ್ಲಿ ಚಲಿಸುತ್ತಿದ್ದ ಮಹಿಳೆಗೆ ಏಕಾಏಕಿ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಕೊನೆಗೆ ಡ್ರೈವರ್​ ಬಸ್ಸನ್ನು ನೇರವಾಗಿ ಆಸ್ಪತ್ರೆ ಬಳಿ ತಂದು ನಿಲ್ಲಿಸಿದ ಘಟನೆ ದೃಶ್ಯ ಸಮೇತ ವೈರಲ್​ ಆಗಿದೆ. ಕೇರಳದ ತ್ರಿಶೂರ್​​ನಿಂದ ಕೋಝಿಕ್ಕೋಡ್​ಗೆ ತೆರಳುತ್ತಿದ್ದ ಬಸ್​ನಲ್ಲಿ ಈ ಘಟನೆ ನಡೆದಿದೆ. ಡ್ರೈವರ್​ ಮಹಾತ್ಕಾರ್ಯದಿಂದ ಮಹಿಳೆ ಬಸ್​ನಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ.

ಬಸ್​ ಪೆರಮಂಗಲಂ ಪ್ರದೇಶವನ್ನು ದಾಟಿದಂತೆ 37 ವರ್ಷದ ಗರ್ಭಿಣಿ ಮಹಿಳೆಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ವಿಚಾರ ತಿಳಿದಂತೆ ಬಸ್​ ಚಾಲಕ ಬಸ್​ ಅನ್ನು ತ್ರಿಶೂರು ಕಡೆಗೆ ತಿರುಗಿಸಿದ್ದಾರೆ. ಅಲ್ಲಿನ ಅಮಲಾ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಅದಕ್ಕೂ ಮುನ್ನ ಆಸ್ಪತ್ರೆಯ ಸಿಬ್ಬಂದಿಗೆ ವಿಚಾರ ತಿಳಿಸಲಾಗಿದೆ. ಬಸ್​ ಆಸ್ಪತ್ರೆಯನ್ನು ತಲುಪುವ ಮೊದಲೇ ಸಿಬ್ಬಂದಿಗಳು ಮತ್ತು ವೈದ್ಯರು ಎಲ್ಲ ವ್ಯವಸ್ಥೆಯನ್ನು ಮಾಡಿಕೊಂಡಿದ್ದರು.

ಬಸ್​ ಆಸ್ಪತ್ರೆ ಬಳಿ ಬಂದಂತೆ ಮಹಿಳೆ ವೈದ್ಯರ ಸಹಾಯದಲ್ಲಿ ಬಸ್​ನಲ್ಲೇ ಹೆರಿಗೆಯಾಗಿದ್ದಾಳೆ. ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಇನ್ನು ಮಹಿಳೆಯ ಹೆರಿಗೆ ಯಶಸ್ವಿಯಾಗಿದೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ತಾಯಿ ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ಬಸ್​ ಚಾಲಕ ಬಸ್​ ಅನ್ನು ಆಸ್ಪತ್ರೆಗೆ ಬಳಿ ಚಲಾಯಿಸಿಕೊಂಡು ಬರುವ, ಮಹಿಳೆ ಹೆಣ್ಣು ಮಗುವಿನ ಜನ್ಮ ನೀಡಿದ ದೃಶ್ಯ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಇನ್ನು ದೃಶ್ಯವನ್ನು ಕಂಡು ಚಾಲಕ, ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳಿಗೆ ನೆಟ್ಟಿಗರು ಧನ್ಯವಾದ ಹೇಳಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

13 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

14 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

14 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

14 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

14 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

15 hours ago