Featured

ಪ್ರಯಾಣದ ವೇಳೆ ಹೆರಿಗೆ ನೋವು  ;  ಬಸ್ಸನ್ನು ನೇರವಾಗಿ ಆಸ್ಪತ್ರೆ ಬಳಿ ತಂದು ನಿಲ್ಲಿಸಿದ ಚಾಲಕ – ಬಸ್​ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ – vishwanews24

ಪ್ರಯಾಣದ ವೇಳೆ ಹೆರಿಗೆ ನೋವು  ;  ಬಸ್ಸನ್ನು ನೇರವಾಗಿ ಆಸ್ಪತ್ರೆ ಬಳಿ ತಂದು ನಿಲ್ಲಿಸಿದ ಚಾಲಕ – ಬಸ್​ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಬಸ್​ನಲ್ಲಿ ಚಲಿಸುತ್ತಿದ್ದ ಮಹಿಳೆಗೆ ಏಕಾಏಕಿ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಕೊನೆಗೆ ಡ್ರೈವರ್​ ಬಸ್ಸನ್ನು ನೇರವಾಗಿ ಆಸ್ಪತ್ರೆ ಬಳಿ ತಂದು ನಿಲ್ಲಿಸಿದ ಘಟನೆ ದೃಶ್ಯ ಸಮೇತ ವೈರಲ್​ ಆಗಿದೆ. ಕೇರಳದ ತ್ರಿಶೂರ್​​ನಿಂದ ಕೋಝಿಕ್ಕೋಡ್​ಗೆ ತೆರಳುತ್ತಿದ್ದ ಬಸ್​ನಲ್ಲಿ ಈ ಘಟನೆ ನಡೆದಿದೆ. ಡ್ರೈವರ್​ ಮಹಾತ್ಕಾರ್ಯದಿಂದ ಮಹಿಳೆ ಬಸ್​ನಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ.

ಬಸ್​ ಪೆರಮಂಗಲಂ ಪ್ರದೇಶವನ್ನು ದಾಟಿದಂತೆ 37 ವರ್ಷದ ಗರ್ಭಿಣಿ ಮಹಿಳೆಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ವಿಚಾರ ತಿಳಿದಂತೆ ಬಸ್​ ಚಾಲಕ ಬಸ್​ ಅನ್ನು ತ್ರಿಶೂರು ಕಡೆಗೆ ತಿರುಗಿಸಿದ್ದಾರೆ. ಅಲ್ಲಿನ ಅಮಲಾ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಅದಕ್ಕೂ ಮುನ್ನ ಆಸ್ಪತ್ರೆಯ ಸಿಬ್ಬಂದಿಗೆ ವಿಚಾರ ತಿಳಿಸಲಾಗಿದೆ. ಬಸ್​ ಆಸ್ಪತ್ರೆಯನ್ನು ತಲುಪುವ ಮೊದಲೇ ಸಿಬ್ಬಂದಿಗಳು ಮತ್ತು ವೈದ್ಯರು ಎಲ್ಲ ವ್ಯವಸ್ಥೆಯನ್ನು ಮಾಡಿಕೊಂಡಿದ್ದರು.

ಬಸ್​ ಆಸ್ಪತ್ರೆ ಬಳಿ ಬಂದಂತೆ ಮಹಿಳೆ ವೈದ್ಯರ ಸಹಾಯದಲ್ಲಿ ಬಸ್​ನಲ್ಲೇ ಹೆರಿಗೆಯಾಗಿದ್ದಾಳೆ. ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಇನ್ನು ಮಹಿಳೆಯ ಹೆರಿಗೆ ಯಶಸ್ವಿಯಾಗಿದೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ತಾಯಿ ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ಬಸ್​ ಚಾಲಕ ಬಸ್​ ಅನ್ನು ಆಸ್ಪತ್ರೆಗೆ ಬಳಿ ಚಲಾಯಿಸಿಕೊಂಡು ಬರುವ, ಮಹಿಳೆ ಹೆಣ್ಣು ಮಗುವಿನ ಜನ್ಮ ನೀಡಿದ ದೃಶ್ಯ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಇನ್ನು ದೃಶ್ಯವನ್ನು ಕಂಡು ಚಾಲಕ, ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳಿಗೆ ನೆಟ್ಟಿಗರು ಧನ್ಯವಾದ ಹೇಳಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

2 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

2 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

3 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

3 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

3 hours ago