Featured

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ – vishwanews24

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ

ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ ಪ್ರವಾಸಿ ಬೋಟ್‌ನಲ್ಲಿದ್ದ ಉಳಿದ ಐವರ ಮೃತದೇಹಗಳನ್ನು ಶುಕ್ರವಾರ ರಕ್ಷಣಾ ಸಿಬ್ಬಂದಿ ಪತ್ತೆಹಚ್ಚಿದ್ದು, ಈ ಮೂಲಕ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಏ.30ರ ಸಂಜೆ ಬೋಟ್‌ನಲ್ಲಿ ಪ್ರವಾಸಿಗರನ್ನು ಕರೆದುಕೊಂಡು ಹೋಗುವ ವೇಳೆ ಅದು ಹಠಾತ್ ಬಿರುಗಾಳಿಗೆ ಸಿಲುಕಿ, ದುರಂತ ಸಂಭವಿಸಿದೆ. ದುರಂತವಾದ ತಕ್ಷಣವೇ ನಾಲ್ಕು ಜನರ ಮೃತದೇಹ ಸಿಕ್ಕಿತ್ತು, ಇದೀಗ ಐದು ಮಂದಿಯ ಮೃತದೇಹವನ್ನು ಹೊರತೆಗೆಯಲಾಗಿದೆ. ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಒಂಬತ್ತಕ್ಕೆ ಏರಿದೆ. ಇದುವರೆಗೆ 28 ಜನರನ್ನು ರಕ್ಷಿಸಲಾಗಿದೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:

ದೋಣಿ ಉರುಳಿ ಬಿದ್ದ ಪರಿಣಾಮ ತಾಯಿ ಮತ್ತು ಅವರ ನಾಲ್ಕು ವರ್ಷದ ಮಗ ಗುರುವಾರ ಸಾವನ್ನಪ್ಪಿದ್ದಾರೆ. ರಕ್ಷಣಾ ತಂಡವು ಇಂದು ಬೆಳಿಗ್ಗೆ ಅವರ ಶವಗಳನ್ನು ಪತ್ತೆಹಚ್ಚಿದೆ, ಮಗುವನ್ನು ಉಳಿಸುವ ಹತಾಶ ಪ್ರಯತ್ನದಲ್ಲಿ ತಾಯಿ ಮಗುವನ್ನು ಎದೆಗೆ ಹಿಡಿದುಕೊಂಡಿದ್ದರು. ಶವಗಳನ್ನು ಬೇರ್ಪಡಿಸಲು ತುಂಬಾ ಕಷ್ಟವಾಯಿತು. ರಕ್ಷಣಾ ಕಾರ್ಯಾಚರಣೆಯ ನಂತರ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಲಾಗುತ್ತಿದೆ. ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾಣೆಯಾದ ಪ್ರಯಾಣಿಕರಿಗಾಗಿ ಸೇನೆ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿಸಿವೆ. ಹೈಡ್ರಾಲಿಕ್ ಕ್ರೇನ್‌ಗಳನ್ನು ಬಳಸಿಕೊಂಡು ಬೋಟ್ ಅನ್ನು ಜಲಮೂಲದಿಂದ ಹೊರತಗೆಯಲಾಗಿದೆ ಎಂದು ರಾಜ್ಯ ಲೋಕೋಪಯೋಗಿ ಸಚಿವ ರಾಕೇಶ್ ಸಿಂಗ್ ವಿವರಿಸಿದ್ದಾರೆ.

ಇದನ್ನೂ ಓದಿ:

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

18 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

18 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

19 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

20 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

20 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

20 hours ago