ಬೆಂಗಳೂರು: ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವನ್ನು ಪ್ರೋತ್ಸಾಹಿಸಲು ಸಹಾಯಧನ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇದರಂತೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಬಳ ನಡೆಸಲು ಒಂದು ಕೋಟಿ ರೂ. ಸಹಾಯಧನ ನೀಡಲು ಆದೇಶ ಹೊರಡಿಸಿದೆ.
ಪ್ರತಿ ಕಂಬಳಕ್ಕೆ 5 ಲಕ್ಷ ರೂ.ಗಳನ್ನು ಸಹಾಯಧನ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು 5 ಲಕ್ಷ ರೂ. ಗಳಂತೆ 50 ಲಕ್ಷ ರೂ ಮತ್ತು ಉಡುಪಿ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು 5 ಲಕ್ಷ ರೂ ಗಳಂತೆ 50 ಲಕ್ಷ ರೂಗಳನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಕಂಬಳಗಳಿಗೆ ಸಹಾಯಧನ ನೀಡಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ಪ್ರಕಟಣೆ ತಿಳಿಸಿದೆ.
ಪ್ರವಾಸೋದ್ಯಮ ಸಚಿವರಾದ ಸಿ.ಪಿ. ಯೋಗೇಶ್ವರ ಕೆಲವು ದಿನಗಳ ಹಿಂದೆ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ದಿನಗಳ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕಂಬಳ ವೀಕ್ಷಿಸಿ ಸ್ಥಳದಲ್ಲಿಯೇ ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಸಹಾಯಧನ ಘೋಷಣೆ ಮಾಡಿದ್ದರು. ಈ ಘೋಷಣೆಯ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರ ಸಹಾಯಧನ ಬಿಡುಗಡೆ ಆದೇಶವನ್ನು ಹೊರಡಿಸಿದೆ.
ಇದನ್ನೂ ಓದಿ : ಉಡುಪಿಯಲ್ಲಿ ಕೊರೊನಾ ಎರಡನೇ ಅಲೆ ಮರುಕಳಿಸಲು ಅವಕಾಶ ಕೊಡಬೇಡಿ : ಡಿಹೆಚ್ಓ ಡಾ. ಸುಧೀರ್ ಚಂದ್ರ ಸೂಡಾ -Vishwanews24
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]