ಬೆಳ್ತಂಗಡಿ: ಪ್ರವಾಹದಿಂದ ತೀವ್ರ ತೊಂದರೆ ಎದುರಿಸಿದ ಜನರಿಗೆ ಶಾಶ್ವತ ಪರಿಹಾರ ಒದಗಿಸುವ ದೀರ್ಘಾವಧಿ ಯೋಜನೆಗಳ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗುರುವಾರ ಪ್ರವಾಹಪೀಡಿತ ಚಾರ್ಮಾಡಿ, ಅಂತರ ಪ್ರದೇಶಕ್ಕೆ ಭೇಟಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಪ್ರವಾಹದಿಂದ ಸಾವಿರಾರು ಕುಟುಂಬಗಳು ಸಮಸ್ಯೆ ಎದುರಿಸುತ್ತಿದ್ದು, 25ರಿಂದ 30 ವರ್ಷಗಳಲ್ಲಿ ಮಾಡಿದ ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಈಗಾಗಲೇ ಮನೆ ನಿರ್ಮಾಣ, ದುರಸ್ತಿಗೆ ಪರಿಹಾರ ನೀಡುತ್ತಿದ್ದು, ಕೃಷಿ ಭೂಮಿಗೂ ಪರಿಹಾರ ನೀಡಲಾಗುತ್ತಿದೆ ಎಂದರು.
ಬೇರೆ ಯಾವುದೇ ರಾಜ್ಯಗಳಲ್ಲಿ ನೀಡದಷ್ಟು ಪರಿಹಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದ್ದಾರೆ. ಈಗಾಗಲೇ ಪ್ರವಾಹಪೀಡಿತ ಪ್ರದೇಶಗಳಲ್ಲಿ ತಡೆಗೋಡೆ ನಿರ್ಮಿಸುವ ಮೂಲಕ ಪ್ರವಾಹ ಬಾರದಂತೆ ತಡೆಯುವ ಪ್ರಯತ್ನ ಮಾಡಲಾಗುತ್ತಿದ್ದು, ಚಾರ್ಮಾಡಿ ಅಂತರ ಭಾಗದಲ್ಲಿ 2ರಿಂದ 3 ಕಿ.ಮೀ. ಉದ್ದಕ್ಕೆ ತಡೆಗೋಡೆ ನಿರ್ಮಿಸಲು ಹಣ ಮಂಜೂರು ಮಾಡಲಾಗುವುದು. ಈ ಭಾಗದಲ್ಲಿ ಅಧಿಕ ನೀರಿನ ಜತೆಗೆ ಭಾರಿ ಗಾತ್ರದ ಮರಗಳು ಉರುಳುತ್ತಿರುವುದರಿಂದ ಅಣೆೆಕಟ್ಟಿನಲ್ಲಿ ಸಿಲುಕಿ ನೀರು ಹೆಚ್ಚಾಗಿ ಪ್ರವಾಹ ಸೃಷ್ಟಿಯಾಗುತ್ತಿದೆ. ಮುಂದಿನ ಆರ್ಥಿಕ ವರ್ಷದಲ್ಲಿ ಇಲ್ಲಿಗೆ ಶಾಶ್ವತ ಸೇತುವೆ ನಿರ್ಮಿಸಲು ಹಣ ಬಿಡುಗಡೆಗೊಳಿಸಲಾಗುವುದು ಎಂದು ತಿಳಿಸಿದರು.
ಶಾಸಕ ಹರೀಶ್ ಪೂಂಜ, ಪಶ್ಚಿಮ ವಲಯ ಐಜಿ ಅರುಣ್ ಚಕ್ರವರ್ತಿ, ಎಸ್ಪಿ ಲಕ್ಷ್ಮೀಪ್ರಸಾದ್, ತಹಸೀಲ್ದಾರ್ ಗಣಪತಿ ಶಾಸ್ತ್ರಿ, ಸರ್ಕಲ್ ಇನ್ಸ್ಪ್ಪೆಕ್ಟರ್ ಸಂದೇಶ್ ಪಿ.ಜಿ, ಚಾರ್ಮಾಡಿ ಗ್ರಾಪಂ ಅಧ್ಯಕ್ಷೆ ಶೈಲಜಾ, ತಾಪಂ ಸದಸ್ಯರಾದ ಕೊರಗಪ್ಪ, ಶಶಿಧರ ಕಲ್ಮಂಜ, ತಾಲೂಕು ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಮುಖರಾದ ಬಾಲಕೃಷ್ಣ ಶೆಟ್ಟಿ, ಸೀತಾರಾಮ ಬಿ.ಎಸ್. ಮತ್ತಿತರರಿದ್ದರು.
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…