Featured

ಪ್ರವಾಹದಿಂದ ತೀವ್ರ ತೊಂದರೆ ಎದುರಿಸಿದ ಜನರಿಗೆ ಶಾಶ್ವತ ಪರಿಹಾರ : ಬಸವರಾಜ ಬೊಮ್ಮಾಯಿ -Vishwanews24

ಬೆಳ್ತಂಗಡಿ: ಪ್ರವಾಹದಿಂದ ತೀವ್ರ ತೊಂದರೆ ಎದುರಿಸಿದ ಜನರಿಗೆ ಶಾಶ್ವತ ಪರಿಹಾರ ಒದಗಿಸುವ ದೀರ್ಘಾವಧಿ ಯೋಜನೆಗಳ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗುರುವಾರ ಪ್ರವಾಹಪೀಡಿತ ಚಾರ್ಮಾಡಿ, ಅಂತರ ಪ್ರದೇಶಕ್ಕೆ ಭೇಟಿ  ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಪ್ರವಾಹದಿಂದ ಸಾವಿರಾರು ಕುಟುಂಬಗಳು ಸಮಸ್ಯೆ ಎದುರಿಸುತ್ತಿದ್ದು, 25ರಿಂದ 30 ವರ್ಷಗಳಲ್ಲಿ ಮಾಡಿದ ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಈಗಾಗಲೇ ಮನೆ ನಿರ್ಮಾಣ, ದುರಸ್ತಿಗೆ ಪರಿಹಾರ ನೀಡುತ್ತಿದ್ದು, ಕೃಷಿ ಭೂಮಿಗೂ ಪರಿಹಾರ ನೀಡಲಾಗುತ್ತಿದೆ ಎಂದರು.

ಬೇರೆ ಯಾವುದೇ ರಾಜ್ಯಗಳಲ್ಲಿ ನೀಡದಷ್ಟು ಪರಿಹಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದ್ದಾರೆ. ಈಗಾಗಲೇ ಪ್ರವಾಹಪೀಡಿತ ಪ್ರದೇಶಗಳಲ್ಲಿ ತಡೆಗೋಡೆ ನಿರ್ಮಿಸುವ ಮೂಲಕ ಪ್ರವಾಹ ಬಾರದಂತೆ ತಡೆಯುವ ಪ್ರಯತ್ನ ಮಾಡಲಾಗುತ್ತಿದ್ದು, ಚಾರ್ಮಾಡಿ ಅಂತರ ಭಾಗದಲ್ಲಿ 2ರಿಂದ 3 ಕಿ.ಮೀ. ಉದ್ದಕ್ಕೆ ತಡೆಗೋಡೆ ನಿರ್ಮಿಸಲು ಹಣ ಮಂಜೂರು ಮಾಡಲಾಗುವುದು. ಈ ಭಾಗದಲ್ಲಿ ಅಧಿಕ ನೀರಿನ ಜತೆಗೆ ಭಾರಿ ಗಾತ್ರದ ಮರಗಳು ಉರುಳುತ್ತಿರುವುದರಿಂದ ಅಣೆೆಕಟ್ಟಿನಲ್ಲಿ ಸಿಲುಕಿ ನೀರು ಹೆಚ್ಚಾಗಿ ಪ್ರವಾಹ ಸೃಷ್ಟಿಯಾಗುತ್ತಿದೆ. ಮುಂದಿನ ಆರ್ಥಿಕ ವರ್ಷದಲ್ಲಿ ಇಲ್ಲಿಗೆ ಶಾಶ್ವತ ಸೇತುವೆ ನಿರ್ಮಿಸಲು ಹಣ ಬಿಡುಗಡೆಗೊಳಿಸಲಾಗುವುದು ಎಂದು ತಿಳಿಸಿದರು.

ಶಾಸಕ ಹರೀಶ್ ಪೂಂಜ, ಪಶ್ಚಿಮ ವಲಯ ಐಜಿ ಅರುಣ್ ಚಕ್ರವರ್ತಿ, ಎಸ್‌ಪಿ ಲಕ್ಷ್ಮೀಪ್ರಸಾದ್, ತಹಸೀಲ್ದಾರ್ ಗಣಪತಿ ಶಾಸ್ತ್ರಿ, ಸರ್ಕಲ್ ಇನ್‌ಸ್ಪ್ಪೆಕ್ಟರ್ ಸಂದೇಶ್ ಪಿ.ಜಿ, ಚಾರ್ಮಾಡಿ ಗ್ರಾಪಂ ಅಧ್ಯಕ್ಷೆ ಶೈಲಜಾ, ತಾಪಂ ಸದಸ್ಯರಾದ ಕೊರಗಪ್ಪ, ಶಶಿಧರ ಕಲ್ಮಂಜ, ತಾಲೂಕು ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಮುಖರಾದ ಬಾಲಕೃಷ್ಣ ಶೆಟ್ಟಿ, ಸೀತಾರಾಮ ಬಿ.ಎಸ್. ಮತ್ತಿತರರಿದ್ದರು.

 

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

8 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

8 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

9 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

9 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

9 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

10 hours ago