ಬೆಳ್ತಂಗಡಿ: ಪ್ರವಾಹದಿಂದ ತೀವ್ರ ತೊಂದರೆ ಎದುರಿಸಿದ ಜನರಿಗೆ ಶಾಶ್ವತ ಪರಿಹಾರ ಒದಗಿಸುವ ದೀರ್ಘಾವಧಿ ಯೋಜನೆಗಳ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗುರುವಾರ ಪ್ರವಾಹಪೀಡಿತ ಚಾರ್ಮಾಡಿ, ಅಂತರ ಪ್ರದೇಶಕ್ಕೆ ಭೇಟಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಪ್ರವಾಹದಿಂದ ಸಾವಿರಾರು ಕುಟುಂಬಗಳು ಸಮಸ್ಯೆ ಎದುರಿಸುತ್ತಿದ್ದು, 25ರಿಂದ 30 ವರ್ಷಗಳಲ್ಲಿ ಮಾಡಿದ ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಈಗಾಗಲೇ ಮನೆ ನಿರ್ಮಾಣ, ದುರಸ್ತಿಗೆ ಪರಿಹಾರ ನೀಡುತ್ತಿದ್ದು, ಕೃಷಿ ಭೂಮಿಗೂ ಪರಿಹಾರ ನೀಡಲಾಗುತ್ತಿದೆ ಎಂದರು.
ಬೇರೆ ಯಾವುದೇ ರಾಜ್ಯಗಳಲ್ಲಿ ನೀಡದಷ್ಟು ಪರಿಹಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದ್ದಾರೆ. ಈಗಾಗಲೇ ಪ್ರವಾಹಪೀಡಿತ ಪ್ರದೇಶಗಳಲ್ಲಿ ತಡೆಗೋಡೆ ನಿರ್ಮಿಸುವ ಮೂಲಕ ಪ್ರವಾಹ ಬಾರದಂತೆ ತಡೆಯುವ ಪ್ರಯತ್ನ ಮಾಡಲಾಗುತ್ತಿದ್ದು, ಚಾರ್ಮಾಡಿ ಅಂತರ ಭಾಗದಲ್ಲಿ 2ರಿಂದ 3 ಕಿ.ಮೀ. ಉದ್ದಕ್ಕೆ ತಡೆಗೋಡೆ ನಿರ್ಮಿಸಲು ಹಣ ಮಂಜೂರು ಮಾಡಲಾಗುವುದು. ಈ ಭಾಗದಲ್ಲಿ ಅಧಿಕ ನೀರಿನ ಜತೆಗೆ ಭಾರಿ ಗಾತ್ರದ ಮರಗಳು ಉರುಳುತ್ತಿರುವುದರಿಂದ ಅಣೆೆಕಟ್ಟಿನಲ್ಲಿ ಸಿಲುಕಿ ನೀರು ಹೆಚ್ಚಾಗಿ ಪ್ರವಾಹ ಸೃಷ್ಟಿಯಾಗುತ್ತಿದೆ. ಮುಂದಿನ ಆರ್ಥಿಕ ವರ್ಷದಲ್ಲಿ ಇಲ್ಲಿಗೆ ಶಾಶ್ವತ ಸೇತುವೆ ನಿರ್ಮಿಸಲು ಹಣ ಬಿಡುಗಡೆಗೊಳಿಸಲಾಗುವುದು ಎಂದು ತಿಳಿಸಿದರು.
ಶಾಸಕ ಹರೀಶ್ ಪೂಂಜ, ಪಶ್ಚಿಮ ವಲಯ ಐಜಿ ಅರುಣ್ ಚಕ್ರವರ್ತಿ, ಎಸ್ಪಿ ಲಕ್ಷ್ಮೀಪ್ರಸಾದ್, ತಹಸೀಲ್ದಾರ್ ಗಣಪತಿ ಶಾಸ್ತ್ರಿ, ಸರ್ಕಲ್ ಇನ್ಸ್ಪ್ಪೆಕ್ಟರ್ ಸಂದೇಶ್ ಪಿ.ಜಿ, ಚಾರ್ಮಾಡಿ ಗ್ರಾಪಂ ಅಧ್ಯಕ್ಷೆ ಶೈಲಜಾ, ತಾಪಂ ಸದಸ್ಯರಾದ ಕೊರಗಪ್ಪ, ಶಶಿಧರ ಕಲ್ಮಂಜ, ತಾಲೂಕು ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಮುಖರಾದ ಬಾಲಕೃಷ್ಣ ಶೆಟ್ಟಿ, ಸೀತಾರಾಮ ಬಿ.ಎಸ್. ಮತ್ತಿತರರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…