ಪ್ರವಾಹ ನಿರ್ವಹಣೆ: ಉಡುಪಿಗೆ 5 ಕೋಟಿ ಬಿಡುಗಡೆ , ಪಡುಬಿದ್ರಿ ಕಡಲ್ಕೊರತೆಗೆ ಶಾಶ್ವತ ತಡೆಗೋಡೆ ನಿರ್ಮಾಣ : ಆರ್. ಅಶೋಕ್ -Vishwanews24

ಪಡುಬಿದ್ರಿ: ಇಲ್ಲಿನ ಕಡಲ ತೀರದಲ್ಲಿ ಪ್ರತಿ ಬಾರಿ ಮಳೆಗಾಲದಲ್ಲಿ ಕಡಲ್ಕೊರತೆ ಉಂಟಾಗುತ್ತಿದ್ದು, ಇದಕ್ಕೆ ಶಾಶ್ವತ ತಡೆಗೋಡೆ ನಿರ್ಮಿಸಲು ನೀಲಾನಕ್ಷೆ ಸಿದ್ಧಪಡಿಸಿ ಕಳುಹಿಸಿಕೊಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ. ಅವರು ನೀಲಾನಕ್ಷೆ ಸಿದ್ಧಪಡಿಸಿ ಪ್ರಸ್ತಾವನೆ ಕೊಟ್ಟ ಕೂಡಲೇ ಹಣ ಬಿಡುಗಡೆ ಮಾಡುತ್ತೇನೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.

ಕಾಪು ತಾಲ್ಲೂಕಿನ ಪಡುಬಿದ್ರಿ ಕಡಲ ತೀರದಲ್ಲಿ ಉಂಟಾಗಿರುವ ಕಡಲ್ಕೊರೆತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾಜ್ಯ ಸರ್ಕಾರದಲ್ಲಿ ಹಣಕ್ಕೆ ಕೊರತೆಯಿಲ್ಲ. ಕೇಂದ್ರ ಸರ್ಕಾರದ ಎನ್ ಡಿಆರ್ ಎಫ್ ನಿಧಿಯಲ್ಲಿ 200 ಕೋಟಿ ರೂ. ಹಣವಿದೆ. ಆ ಅನುದಾನದಿಂದ ಪ್ರಸ್ತಾವನೆ ಕೊಟ್ಟ ತಕ್ಷಣವೇ ಹಣ ಬಿಡುಗಡೆ ಮಾಡುತ್ತೇನೆ ಎಂದು ತಿಳಿಸಿದರು.

ಪಡುಬಿದ್ರಿಯ ಕಡಲ ತೀರದಲ್ಲಿರುವ ಪ್ರವಾಸೋದ್ಯಮ ಸೆಂಟರ್ ಗೂ ಕಡಲ್ಕೊರೆತದಿಂದ ಹಾನಿಯಾಗಿದೆ. ಇಲ್ಲಿ ಪ್ರವಾಸೋದ್ಯಮಕ್ಕೆ ಪ್ರತಿಕೂಲವಾದ ವಾತಾವರಣ ಇದೆ. ಹಾಗಾಗಿ ಪ್ರವಾಸೋದ್ಯ ಸಚಿವರ ಜತೆ ಚರ್ಚಿಸಿ, ಇಲ್ಲಿನ ಪ್ರವಾಸೋದ್ಯಮ ಸೆಂಟರ್ ನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಸೂಚಿಸುತ್ತೇನೆ ಎಂದರು.

ಇಲ್ಲಿ ನೈಸರ್ಗಿಕವಾಗಿ ಬರುವ ಅಲೆಗಳಿಗೆ ಟೂರಿಸಂ ಸೆಂಟರ್ ಅಡೆತಡೆಯಾಗಿದ್ದು, ಇದರಿಂದ ಹೆಚ್ಚಿನ ಕಡಲ್ಕೊರೆತ ಸಂಭವಿಸುತ್ತಿದೆ. ಇಲ್ಲಿ ಬಹಳಷ್ಟು ಮನೆಗಳಿವೆ. ಸಾರ್ವಜನಿಕರಿಗೆ ಏನಾದರೂ ತೊಂದರೆ ಆದಂತಹ ಸಂದರ್ಭದಲ್ಲಿ ತುರ್ತು ಕಾರ್ಯಾಚರಣೆಗಳನ್ನು ಕೈಗೊಳ್ಳಲು ತೊಂದರೆ ಆಗುತ್ತದೆ. ಹಾಗಾಗಿ ಈ ಪ್ರವಾಸೋದ್ಯಮ ಸೆಂಟರ್ ನ್ನು ತೆರವುಗೊಳಿಸಿ, ಪೂರ್ತಿ ತಡೆಗೋಡೆ ಕಟ್ಟಲು ಪ್ರಸ್ತಾವನೆ ಕಳುಹಿಸುವಂತೆ ಸೂಚನೆ ನೀಡಿದ್ದೇನೆ ಎಂದು ಸಚಿವರು ಹೇಳಿದರು.

ಪ್ರವಾಹ ನಿರ್ವಹಣೆ: ಉಡುಪಿಗೆ 5 ಕೋಟಿ ಬಿಡುಗಡೆ
ಪ್ರವಾಹ ನಿರ್ವಹಣೆಗೆ ಸಂಬಂಧಿಸಿ ಉಡುಪಿ ಜಿಲ್ಲಾಡಳಿತದ ನಿಧಿಯಲ್ಲಿ 3.5. ಕೋಟಿ ರೂ. ಮೀಸಲಿಡಲಾಗಿದೆ. ಆದರೂ ತುರ್ತಾಗಿ ಸರ್ಕಾರದಿಂದ ಹೆಚ್ಚುವರಿಯಾಗಿ 5 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು.

 

 

 

 

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

3 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

3 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

3 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

4 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

4 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

6 hours ago