ಪಡುಬಿದ್ರಿ: ಇಲ್ಲಿನ ಕಡಲ ತೀರದಲ್ಲಿ ಪ್ರತಿ ಬಾರಿ ಮಳೆಗಾಲದಲ್ಲಿ ಕಡಲ್ಕೊರತೆ ಉಂಟಾಗುತ್ತಿದ್ದು, ಇದಕ್ಕೆ ಶಾಶ್ವತ ತಡೆಗೋಡೆ ನಿರ್ಮಿಸಲು ನೀಲಾನಕ್ಷೆ ಸಿದ್ಧಪಡಿಸಿ ಕಳುಹಿಸಿಕೊಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ. ಅವರು ನೀಲಾನಕ್ಷೆ ಸಿದ್ಧಪಡಿಸಿ ಪ್ರಸ್ತಾವನೆ ಕೊಟ್ಟ ಕೂಡಲೇ ಹಣ ಬಿಡುಗಡೆ ಮಾಡುತ್ತೇನೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.
ಕಾಪು ತಾಲ್ಲೂಕಿನ ಪಡುಬಿದ್ರಿ ಕಡಲ ತೀರದಲ್ಲಿ ಉಂಟಾಗಿರುವ ಕಡಲ್ಕೊರೆತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾಜ್ಯ ಸರ್ಕಾರದಲ್ಲಿ ಹಣಕ್ಕೆ ಕೊರತೆಯಿಲ್ಲ. ಕೇಂದ್ರ ಸರ್ಕಾರದ ಎನ್ ಡಿಆರ್ ಎಫ್ ನಿಧಿಯಲ್ಲಿ 200 ಕೋಟಿ ರೂ. ಹಣವಿದೆ. ಆ ಅನುದಾನದಿಂದ ಪ್ರಸ್ತಾವನೆ ಕೊಟ್ಟ ತಕ್ಷಣವೇ ಹಣ ಬಿಡುಗಡೆ ಮಾಡುತ್ತೇನೆ ಎಂದು ತಿಳಿಸಿದರು.
ಪಡುಬಿದ್ರಿಯ ಕಡಲ ತೀರದಲ್ಲಿರುವ ಪ್ರವಾಸೋದ್ಯಮ ಸೆಂಟರ್ ಗೂ ಕಡಲ್ಕೊರೆತದಿಂದ ಹಾನಿಯಾಗಿದೆ. ಇಲ್ಲಿ ಪ್ರವಾಸೋದ್ಯಮಕ್ಕೆ ಪ್ರತಿಕೂಲವಾದ ವಾತಾವರಣ ಇದೆ. ಹಾಗಾಗಿ ಪ್ರವಾಸೋದ್ಯ ಸಚಿವರ ಜತೆ ಚರ್ಚಿಸಿ, ಇಲ್ಲಿನ ಪ್ರವಾಸೋದ್ಯಮ ಸೆಂಟರ್ ನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಸೂಚಿಸುತ್ತೇನೆ ಎಂದರು.
ಇಲ್ಲಿ ನೈಸರ್ಗಿಕವಾಗಿ ಬರುವ ಅಲೆಗಳಿಗೆ ಟೂರಿಸಂ ಸೆಂಟರ್ ಅಡೆತಡೆಯಾಗಿದ್ದು, ಇದರಿಂದ ಹೆಚ್ಚಿನ ಕಡಲ್ಕೊರೆತ ಸಂಭವಿಸುತ್ತಿದೆ. ಇಲ್ಲಿ ಬಹಳಷ್ಟು ಮನೆಗಳಿವೆ. ಸಾರ್ವಜನಿಕರಿಗೆ ಏನಾದರೂ ತೊಂದರೆ ಆದಂತಹ ಸಂದರ್ಭದಲ್ಲಿ ತುರ್ತು ಕಾರ್ಯಾಚರಣೆಗಳನ್ನು ಕೈಗೊಳ್ಳಲು ತೊಂದರೆ ಆಗುತ್ತದೆ. ಹಾಗಾಗಿ ಈ ಪ್ರವಾಸೋದ್ಯಮ ಸೆಂಟರ್ ನ್ನು ತೆರವುಗೊಳಿಸಿ, ಪೂರ್ತಿ ತಡೆಗೋಡೆ ಕಟ್ಟಲು ಪ್ರಸ್ತಾವನೆ ಕಳುಹಿಸುವಂತೆ ಸೂಚನೆ ನೀಡಿದ್ದೇನೆ ಎಂದು ಸಚಿವರು ಹೇಳಿದರು.
ಪ್ರವಾಹ ನಿರ್ವಹಣೆ: ಉಡುಪಿಗೆ 5 ಕೋಟಿ ಬಿಡುಗಡೆ
ಪ್ರವಾಹ ನಿರ್ವಹಣೆಗೆ ಸಂಬಂಧಿಸಿ ಉಡುಪಿ ಜಿಲ್ಲಾಡಳಿತದ ನಿಧಿಯಲ್ಲಿ 3.5. ಕೋಟಿ ರೂ. ಮೀಸಲಿಡಲಾಗಿದೆ. ಆದರೂ ತುರ್ತಾಗಿ ಸರ್ಕಾರದಿಂದ ಹೆಚ್ಚುವರಿಯಾಗಿ 5 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…