ಪ್ರವಾಹ ನಿರ್ವಹಣೆ: ಉಡುಪಿಗೆ 5 ಕೋಟಿ ಬಿಡುಗಡೆ , ಪಡುಬಿದ್ರಿ ಕಡಲ್ಕೊರತೆಗೆ ಶಾಶ್ವತ ತಡೆಗೋಡೆ ನಿರ್ಮಾಣ : ಆರ್. ಅಶೋಕ್ -Vishwanews24

ಪಡುಬಿದ್ರಿ: ಇಲ್ಲಿನ ಕಡಲ ತೀರದಲ್ಲಿ ಪ್ರತಿ ಬಾರಿ ಮಳೆಗಾಲದಲ್ಲಿ ಕಡಲ್ಕೊರತೆ ಉಂಟಾಗುತ್ತಿದ್ದು, ಇದಕ್ಕೆ ಶಾಶ್ವತ ತಡೆಗೋಡೆ ನಿರ್ಮಿಸಲು ನೀಲಾನಕ್ಷೆ ಸಿದ್ಧಪಡಿಸಿ ಕಳುಹಿಸಿಕೊಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ. ಅವರು ನೀಲಾನಕ್ಷೆ ಸಿದ್ಧಪಡಿಸಿ ಪ್ರಸ್ತಾವನೆ ಕೊಟ್ಟ ಕೂಡಲೇ ಹಣ ಬಿಡುಗಡೆ ಮಾಡುತ್ತೇನೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.

ಕಾಪು ತಾಲ್ಲೂಕಿನ ಪಡುಬಿದ್ರಿ ಕಡಲ ತೀರದಲ್ಲಿ ಉಂಟಾಗಿರುವ ಕಡಲ್ಕೊರೆತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾಜ್ಯ ಸರ್ಕಾರದಲ್ಲಿ ಹಣಕ್ಕೆ ಕೊರತೆಯಿಲ್ಲ. ಕೇಂದ್ರ ಸರ್ಕಾರದ ಎನ್ ಡಿಆರ್ ಎಫ್ ನಿಧಿಯಲ್ಲಿ 200 ಕೋಟಿ ರೂ. ಹಣವಿದೆ. ಆ ಅನುದಾನದಿಂದ ಪ್ರಸ್ತಾವನೆ ಕೊಟ್ಟ ತಕ್ಷಣವೇ ಹಣ ಬಿಡುಗಡೆ ಮಾಡುತ್ತೇನೆ ಎಂದು ತಿಳಿಸಿದರು.

ಪಡುಬಿದ್ರಿಯ ಕಡಲ ತೀರದಲ್ಲಿರುವ ಪ್ರವಾಸೋದ್ಯಮ ಸೆಂಟರ್ ಗೂ ಕಡಲ್ಕೊರೆತದಿಂದ ಹಾನಿಯಾಗಿದೆ. ಇಲ್ಲಿ ಪ್ರವಾಸೋದ್ಯಮಕ್ಕೆ ಪ್ರತಿಕೂಲವಾದ ವಾತಾವರಣ ಇದೆ. ಹಾಗಾಗಿ ಪ್ರವಾಸೋದ್ಯ ಸಚಿವರ ಜತೆ ಚರ್ಚಿಸಿ, ಇಲ್ಲಿನ ಪ್ರವಾಸೋದ್ಯಮ ಸೆಂಟರ್ ನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಸೂಚಿಸುತ್ತೇನೆ ಎಂದರು.

ಇಲ್ಲಿ ನೈಸರ್ಗಿಕವಾಗಿ ಬರುವ ಅಲೆಗಳಿಗೆ ಟೂರಿಸಂ ಸೆಂಟರ್ ಅಡೆತಡೆಯಾಗಿದ್ದು, ಇದರಿಂದ ಹೆಚ್ಚಿನ ಕಡಲ್ಕೊರೆತ ಸಂಭವಿಸುತ್ತಿದೆ. ಇಲ್ಲಿ ಬಹಳಷ್ಟು ಮನೆಗಳಿವೆ. ಸಾರ್ವಜನಿಕರಿಗೆ ಏನಾದರೂ ತೊಂದರೆ ಆದಂತಹ ಸಂದರ್ಭದಲ್ಲಿ ತುರ್ತು ಕಾರ್ಯಾಚರಣೆಗಳನ್ನು ಕೈಗೊಳ್ಳಲು ತೊಂದರೆ ಆಗುತ್ತದೆ. ಹಾಗಾಗಿ ಈ ಪ್ರವಾಸೋದ್ಯಮ ಸೆಂಟರ್ ನ್ನು ತೆರವುಗೊಳಿಸಿ, ಪೂರ್ತಿ ತಡೆಗೋಡೆ ಕಟ್ಟಲು ಪ್ರಸ್ತಾವನೆ ಕಳುಹಿಸುವಂತೆ ಸೂಚನೆ ನೀಡಿದ್ದೇನೆ ಎಂದು ಸಚಿವರು ಹೇಳಿದರು.

ಪ್ರವಾಹ ನಿರ್ವಹಣೆ: ಉಡುಪಿಗೆ 5 ಕೋಟಿ ಬಿಡುಗಡೆ
ಪ್ರವಾಹ ನಿರ್ವಹಣೆಗೆ ಸಂಬಂಧಿಸಿ ಉಡುಪಿ ಜಿಲ್ಲಾಡಳಿತದ ನಿಧಿಯಲ್ಲಿ 3.5. ಕೋಟಿ ರೂ. ಮೀಸಲಿಡಲಾಗಿದೆ. ಆದರೂ ತುರ್ತಾಗಿ ಸರ್ಕಾರದಿಂದ ಹೆಚ್ಚುವರಿಯಾಗಿ 5 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು.

 

 

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago