ಮೈಸೂರು; ರಾಜ್ಯದ ಪ್ರವಾಹ ಪರಿಸ್ಥಿತಿಯ ಕುರಿತು ಮಾಹಿತಿ ಪಡೆಯುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 7 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, “ಪ್ರವಾಹದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಲವು ಹಾನಿಯಾಗಿ ಅಪಾರ ನಷ್ಟ ಉಂಟಾಗಿದೆ. ಹಾಗಾಗಿ ಪ್ರವಾಹ ಪೀಡಿತ ಪ್ರದೇಶಗಳ ಮಾಹಿತಿ ಪಡೆಯಲು ನರೇಂದ್ರ ಮೋದಿ ಸೆಪ್ಟೆಂಬರ್ 7 ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ವೇಳೆ ರಾಜ್ಯದ ನೆರೆ ಪರಿಸ್ಥಿತಿಯ ಕುರಿತು ಅವರಿಗೆ ಮನದಟ್ಟು ಮಾಡಿಕೊಡಲಾಗುವುದು. ಹೆಚ್ಚಿನ ಪರಿಹಾರಕ್ಕೂ ಒತ್ತಾಯಿಸಲಾಗುವುದು. ಈ ಕುರಿತು ಕೇಂದ್ರದಿಂದ ಆದಷ್ಟು ಶೀಘ್ರದಲ್ಲಿ ಶುಭ ಸುದ್ದಿ ಸಿಗುವ ವಿಶ್ವಾಸ ಇದೆ” ಎಂದು ತಿಳಿಸಿದ್ದಾರೆ.
ಈ ವೇಳೆ ಕ್ರೀಡಾಪಟು ಪ್ರಕಾಶ್ ನಂಜಪ್ಪ, ಸಲ್ಮಾನ್ ಪಾಷಾ, ಅರ್ಚನಾ ಕಾಮತ್ ಸಮಾರಂಭದಲ್ಲಿ ಭಾಗಿಯಾಗಿ ಯುವ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಿದರು. ಅಭಿಯಾನ ಕಾರ್ಯಕ್ರಮಕ್ಕೆ ಸಚಿವರಾದ ಸಿ.ಟಿ ರವಿ, ಬಸವರಾಜ್ ಬೊಮ್ಮಾಯಿ, ಆರ್ ಅಶೋಕ್ ಅವರು ಉಪಸ್ಥಿತರಿದ್ದರು.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…