ಪ್ರವಾಹ ಪರಿಸ್ಥಿತಿ ಇದ್ದರೂ ಕರ್ನಾಟಕ ರಾಜ್ಯದ ಬಗ್ಗೆ ಪ್ರಧಾನಮಂತ್ರಿ ಗಮನಹರಿಸುತ್ತಿಲ್ಲ : ಸಿದ್ದರಾಮಯ್ಯ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ಟ್ವೀಟ್​ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದು, ಕೇಂದ್ರದ ನಡೆಯನ್ನು ಸ್ವಾಭಿಮಾನಿ ಕರ್ನಾಟಕ ಸಹಿಸುವುದಿಲ್ಲ ಎಂದಿದ್ದಾರೆ.

ಪ್ರವಾಹ ಪರಿಸ್ಥಿತಿ ಇದ್ದರೂ ಕರ್ನಾಟಕ ರಾಜ್ಯದ ಬಗ್ಗೆ ಪ್ರಧಾನಮಂತ್ರಿ ಗಮನಹರಿಸುತ್ತಿಲ್ಲ ಎಂದು ಆರೋಪ ಮಾಡಿದ್ದಾರೆ. ನೆರೆ ಅಥವಾ ಬರಗಾಲದ ಪರಿಸ್ಥಿತಿ ಇದ್ದಾಗ ಈ ಹಿಂದಿನ ಯಾವ ಸರ್ಕಾರಗಳೂ ನಮ್ಮ ರಾಜ್ಯವನ್ನು ಇಷ್ಟೊಂದು ನಿರ್ಲಕ್ಷ್ಯ ಮಾಡಿಲ್ಲ. ನಮ್ಮ ಮುಖ್ಯಮಂತ್ರಿಯನ್ನು ಅವಮಾನ ಮಾಡಿರಲಿಲ್ಲ. ವಾಜಪೇಯಿ ಸರ್ಕಾರ ಕೂಡ ಹೀಗೆ ನಡೆದುಕೊಂಡಿರಲಿಲ್ಲ.

ಸ್ವಾಭಿಮಾನಿ, ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸುವುದಿಲ್ಲ ಎಂದು ಟ್ವೀಟ್​ ಮಾಡಿದ್ದಾರೆ. ರಾಜ್ಯದ ಬರ ಪರಿಸ್ಥಿತಿಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂಬ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.