ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕೊರತೆಯಾಗದ ರೀತಿಯಲ್ಲಿ ಹಣ ಬಿಡುಗಡೆ : ಆರ್.ಅಶೋಕ್ -Vishwanews24
ಬೆಂಗಳೂರು,:ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕೊರತೆಯಾಗದ ರೀತಿಯಲ್ಲಿ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ವಿಧಾನಸೌಧದಲ್ಲಿಂದು ತಮ್ಮ ಕಚೇರಿ ಪೂಜೆ ನೆರೆವೇರಿಸಿದ ನಂತರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಪ್ರವಾಹದಿಂದಾಗಿ ಬಹಳಷ್ಟು ಜನ ನೊಂದಿದ್ದಾರೆ. ಬೆಳಗಾವಿ ಜಿಲ್ಲೆಗೆ ಮತ್ತೆ 30 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಅದೇ ರೀತಿ ಶಿವಮೊಗ್ಗ ಜಿಲ್ಲೆಗೂ ಹಣ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ನಮ್ಮ ಇಲಾಖೆಯಿಂದ ತಡವಾಗದ ಕಾರ್ಯ ನಿರ್ವಹಿಸು ತ್ತಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಯಾವುದೇ ತೊಂದರೆಯಾಗದಂತೆ ಕೆಲಸ ಮಾಡಲಾಗುತ್ತಿದೆ ಎಂದರು.
ಮಹಾರಾಷ್ಟ್ರದಿಂದ ಮತ್ತೆ ನೀರು ಬಿಡುಗಡೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣ ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳು ವಂತೆ ಈಗಾಗಲೇ ಮುನ್ಸೂಚನೆ ನೀಡಿದ್ದೇವೆ ಎಂದು ಹೇಳಿದರು.ಬರಪೀಡಿತ ಪ್ರದೇಶಗಳಿಗೂ ಸರ್ಕಾರ ಆದ್ಯತೆ ನೀಡಿದ್ದು, ಜನರ ಸಮಸ್ಯೆಗಳ ಪರಿಹಾರಕ್ಕೆ ಗಮನ ಕೊಡುತ್ತೇವೆ ಎಂದು ಅವರು ತಿಳಿಸಿದರು.
