ಹುಬ್ಬಳ್ಳಿ : ಪ್ರವಾಹ ಬಂದು 15 ದಿನ ಕಳೆದರೂ ಕೇಂದ್ರದಿಂದ ಒಂದು ನಯಾ ಪೈಸೆ ಬಂದಿಲ್ಲ. ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಒನ್ ಮ್ಯಾನ್ ಶೋ ಮಾಡಿಕೊಂಡು ಬಂದಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ರಾತ್ರಿ ಮಂತ್ರಿ ಮಂಡಲ ವಿಸ್ತರಣೆಯಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬಹುಶಃ ಮಂತ್ರಿ ಮಂಡಲ ಇಲ್ಲದೇ ಇಷ್ಟು ದಿನ ಸರ್ಕಾರ ಇಲ್ಲದೆ ಇದ್ದದ್ದು ಮೊದಲು ಬಾರಿಯಾಗಿದೆ. ಯಡಿಯೂರಪ್ಪ ಪ್ರಧಾನಿ ಅವರನ್ನು ಭೇಟಿಯಾಗಿ ಬಂದಿದ್ದಾರೆ. ಪ್ರಧಾನಿ ಹಣ ಕೊಡುತ್ತೀನಿ ಎಂದು ಎಲ್ಲಿ ಆದರೂ ಹೇಳಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿಯವರಿಗೆ ಸಿಬಿಐ ಎಂದರೆ ವಾಕರಿಕೆ ಇತ್ತು. ಈಗ ಇದ್ದಕ್ಕಿದ್ದಂತೆ ಅವರ ಸರ್ಕಾರ ಬಂದಾಕ್ಷಣ ಸಿಬಿಐ ಮೇಲೆ ವ್ಯಾಮೋಹ ಬಂದಿದೆ. ನಮ್ಮ ಪೊಲೀಸರಿಂದ ತನಿಖೆ ಮಾಡಿಸಬಹುದಿತ್ತು. ಆದರೆ ಸಿಬಿಐಯನ್ನು ದುರ್ಬಳಕೆ ಮಾಡಲು ಹೊರಟಿದ್ದಾರೆ. ಆಪರೇಷನ್ ಕಮಲವನ್ನು ಸಿಬಿಐಗೆ ಕೊಡಲಿ. ಅವರು ಅದನ್ನು ಮಾಡಲ್ಲ. ಅವರು ಆ ರೀತಿ ಮಾಡಿದರೆ ನನಗೆ ಸಂತೋಷವಾಗುತ್ತದೆ ಎಂದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…