ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರ್ ಹತ್ಯೆಯ ಬೆನ್ನಲ್ಲೇ ಕಾರ್ಯಕರ್ತರು ಬಿಜೆಪಿ ನಾಯಕರ ವಿರುದ್ಧವೇ ಆಕ್ರೋಶ ಹೊರಹಾಕಿದ್ದಾರೆ. ಈ ನಡುವೆ ನಳಿನ್ ಕುಮಾರ್ ಕಟೀಲ್ ಅವರು ಮಾಡಿದ್ದ ಭಾಷಣದ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಬೆನ್ನಲ್ಲೇ ಮತ್ತೆ ವೀಡಿಯೋ ಮಾಡಿರುವ ಕಟೀಲ್, ನಮ್ಮ ಕಾರ್ಯಕರ್ತರನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಈ ಸಂಬಂಧ ವೀಡಿಯೋ ಮಾಡಿರುವ ನಳೀನ್, ನಮ್ಮ ಕಾರ್ಯಕರ್ತರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಇಂತಹ ಘಟನೆಗಳು ನಡೆದಾಗ ಕಾರ್ಯಕರ್ತರಿಗೆ ಉತ್ತರ ಕೊಡುವಂತಹ ಕೆಲಸವನ್ನು ಮಾಡುತ್ತೆ. ಈ ಬಗ್ಗೆ ನನಗೆ ವಿಶ್ವಾಸ ಇದೆ. ಮುಖ್ಯಮಂತ್ರಿಗಳ ಬಳಿ ಕೂಡ ಹೇಳಿದ್ದೇನೆ. ಪ್ರವೀಣ್ ಆತ್ಮಕ್ಕೆ ಶಾಂತಿ ಸಿಗುವ ರೀತಿಯಲ್ಲಿ ಉತ್ತರ ಕೊಡುವ ಕೆಲಸ ಮಾಡುತ್ತೇವೆ. ಇದರ ಹಿಂದೆ ಇರುವ ಎಲ್ಲಾ ಷಡ್ಯಂತ್ರ, ಪಿತೂರಿಗಳನ್ನು ಹಾಗೂ ಕೇರಳ ಮುಲದ ಕೈವಾಡಗಳಿದ್ದರೆ ಅದನ್ನು ಕೂಡ ತನಿಖೆ ಮಾಡಿ ಆರೋಪಿಗಳನ್ನು ಬಂಧಿಸುವ ಮೂಲಕ ಉತ್ತರ ಕೊಡುವ ಕೆಲಸ ಸರ್ಕಾರ ಮಾಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಹಿಂದೆ ಭಾಷಣದಲ್ಲಿ ನಳಿನ್ ಕಕುಮಾರ್ ಕಟೀಲ್ ಅವರು, ಕರಾವಳಿ ಜಿಲ್ಲೆಯಲ್ಲಿ ನಾನು ಹೋರಾಟ ಮಾಡಿ ಬಂದವ. ನಮ್ಮ ಜಿಲ್ಲೆಯಲ್ಲಿ ತಾಕತ್ತಿದ್ರೆ ಒಬ್ಬೇ ಒಬ್ಬ ಬಿಜೆಪಿ ಕಾರ್ಯಕರ್ತನನ್ನು ಮುಟ್ಟಿ ನೋಡಿ. ಬಿಜೆಪಿ ತಕ್ಕ ಪಾಠ ಕಲಿಸುತ್ತೆ ಅಂತ ಶಪಥ ಮಾಡಿದ್ದ ವಿಡಿಯೋವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…