ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ಕುಟುಂಬಕ್ಕೆ ನಾನು ವೈಯಕ್ತಿಕವಾಗಿ 1 ಲಕ್ಷ ಪರಿಹಾರ ನೀಡುತ್ತೇನೆ. ಬಗ್ಗು ಬಡಿದರೆ ಮಾತ್ರ ಇದು ನಿಲ್ಲುತ್ತದೆ. ಎಲ್ಲೋ ಒಂದು ಕಡೆ ನಮಗೂ ನೋವಾಗುತ್ತೆ. ಹರ್ಷ ಆಯ್ತು, ಚಂದ್ರು ಆಯ್ತು. ಈಗ ಪ್ರವೀಣ್.. ನಮ್ಮ ಕಾರ್ಯಕರ್ತ ಮುಖಂಡರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ನಮ್ಮ ಸಂಘಟನೆ ಪ್ರಮುಖರಿಗೂ ನೋವಿದೆ ಎಂದರು.
ಯೋಗಿ ಆದಿತ್ಯನಾಥ್ ಮಾದರಿಯಲ್ಲೇ ಹದ್ದುಬಸ್ತಿನಲ್ಲಿ ಇಡಬೇಕು. ಸಾಫ್ಟ್ ಕಾರ್ನರ್ ತೋರಿಸಿದರೆ ಆಗೋದಿಲ್ಲ. ಸಿಎಂ ಬಹಳ ಗಂಭೀರವಾಗಿ ಪರಿಗಣಿಸಿದ್ದಾರೆ. ಕಾಂಗ್ರೆಸ್ ಕಾಲದಲ್ಲಿ 25-30 ಹಿಂದೂ ಯುವಕರ ಹತ್ಯೆ ಆಯ್ತು. ನಮ್ಮ ಸರ್ಕಾರ ಬಂದಾಗ ಕಂಟ್ರೋಲ್ ಆಗಿದೆ ಎಂದು ತಿಳಿಸಿದರು.\
ಯುಪಿ ಮಾದರಿಯಲ್ಲೇ ಕ್ರಮ ಮಾಡಿದರೆ ಮಾತ್ರ ಸಾಧ್ಯ. ಸಿಎಂ ಭೇಟಿ ಮಾಡಿ ಒತ್ತಡ ಹಾಕ್ತೀನಿ, ಕಠಿಣ ಕ್ರಮ ಜರುಗಿಸಬೇಕು. ನನಗೇ ಎರಡು ಬಾರಿ ಬೆದರಿಕೆ ಕರೆ ಬಂದರೂ ಅವರನ್ನು ಪತ್ತೆ ಹಚ್ಚೋದಕ್ಕಾಗಿಲ್ಲ. ನನ್ನಂಥವನ ಪರಿಸ್ಥಿತಿ ಇದಾದರೆ ಸಾಮಾನ್ಯ ಜನರ ಸ್ಥಿತಿ ಏನು..? ಸರ್ಕಾರದ ವೈಫಲ್ಯ ಅಂತ ಹೇಳಲ್ಲ. ಎಂದು ಹೇಳಿದರು.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…